
ನೇಪಿಯರ್(ಜ.22): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿ ನಾಳೆ(ಜ.23)ರಿಂದ ಆರಂಭವಾಗಲಿದೆ. 5 ಏಕದಿನ ಹಾಗೂ 3 ಟಿ20 ಸರಣಿಗೆ ಉಭಯ ತಂಡಗಳು ಸಜ್ಜಾಗಿದೆ. ಸರಣಿ ಆರಂಭಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ತವರಿನ ಗೆಲವುವು ಕುರಿತು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಇಲ್ಲಿದೆ ಭಾರತ-ನ್ಯೂಜಿಲೆಂಡ್ ಏಕದಿನ,ಟಿ20 ಸರಣಿ ವೇಳಾಪಟ್ಟಿ!
ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್ಮನ್. ಆದರೆ ನ್ಯೂಜಿಲೆಂಡ್ ಬೌಲರ್ಗಳು ಕೊಹ್ಲಿಯನ್ನ ಕಟ್ಟಿಹಾಕಲು ಎಲ್ಲಾ ಪ್ರಯತ್ನ ಮಾಡಲಿದ್ದಾರೆ ಎಂದು ವಿಲಿಯಮ್ಸನ್ ಹೇಳಿದ್ದಾರೆ. ಕೊಹ್ಲಿ ಎಲ್ಲಾ ಮಾದರಿಯಲ್ಲೂ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಕೊಹ್ಲಿ ಸವಾಲು ಎದುರಿಸಲು ನ್ಯೂಜಿಲೆಂಡ್ ಹೆಚ್ಚಿನ ಶ್ರಮ ವಹಿಸಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ: ಆಸಿಸ್ ವಿರುದ್ಧದ ಗೆಲುವು- ಆಯ್ಕೆ ಸಮಿತಿಗೆ ಬಿಸಿಸಿಐ ಭರ್ಜರಿ ಗಿಫ್ಟ್!
ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಇತರ ಬ್ಯಾಟ್ಸ್ಮನ್ಗಳನ್ನೂ ಕಟ್ಟಿಹಾಕಲು ರಣತಂತ್ರ ರೂಪಿಸಲಿದ್ದೇವೆ ಎಂದಿದ್ದಾರೆ. ಜನವರಿ 23 ರಿಂದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭವಾಗಲಿದೆ. ಬಳಿಕ 3 ಟಿ20 ಪಂದ್ಯ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.