5ನೇ ಏಕದಿನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ-ತಂಡದಲ್ಲಿ 3 ಬದಲಾವಣೆ!

Published : Feb 03, 2019, 07:19 AM ISTUpdated : Feb 03, 2019, 07:28 AM IST
5ನೇ ಏಕದಿನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ-ತಂಡದಲ್ಲಿ 3 ಬದಲಾವಣೆ!

ಸಾರಾಂಶ

ನ್ಯೂಜಿಲೆಂಡ್ ವಿರುದ್ದದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದೆ. ಗೆಲುವಿಗಾಗಿ ಭಾರತ ಮಾಡಿರುವ ಬದಲಾವಣೆ ಏನು? ಇಲ್ಲಿದೆ ವಿವರ.  

ವೆಲ್ಟಿಂಗ್ಟನ್(ಫೆ.03): ನ್ಯೂಜಿಲೆಂಡ್ ವಿರುದ್ದಧ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 4ನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ಅಂತಿಮ ಪಂದ್ಯದಲ್ಲಿ ತಿರುಗೇಟು ನೀಡೋ ವಿಶ್ವಾಸದಲ್ಲಿದೆ. ಇನ್ನು ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ಐಪಿಎಲ್‌ ಪ್ರದರ್ಶನವನ್ನ ಟೆಸ್ಟ್, ಏಕದಿನ ಆಯ್ಕೆಗೆ ಪರಿಗಣಿಸಲ್ಲ- ಬಿಸಿಸಿಐ!

ಇಂಜುರಿಯಿಂದ ಕಳೆದೆರಡು ಪಂದ್ಯದಿಂದ ಹೊರಗುಳಿದಿದ್ದ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ತಂಡಕ್ಕೆ ವಾಪಾಸ್ ಆಗಿದ್ದಾರೆ. ಧೋನಿಗಾಗಿ ದಿನೇಶ್ ಕಾರ್ತಿಕ್ ತಮ್ಮ ಸ್ಥಾನ ಬಿಟ್ಟಿಕೊಟ್ಟಿದ್ದಾರೆ. ಖಲೀಲ್ ಅಹಮ್ಮದ್ ಬದಲು ವೇಗಿ ಮೊಹಮ್ಮದ್ ಶಮಿ ವಾಪಾಸ್ ಆಗಿದ್ದರೆ, ಕುಲ್ದೀಪ್ ಯಾದವ್ ಬದಲು ವಿಜಯ್ ಶಂಕರ್ ಸ್ಥಾನ ಪಡೆದುಕೊಂಡಿದ್ದಾರೆ.

 

 

ನ್ಯೂಜಿಲೆಂಡ್ ವಿರುದ್ದದ ಆರಂಭಿಕ 3 ಪಂದ್ಯ ಗೆದ್ದು ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ  ನಾಲ್ಕನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು. ಇದೀಗ 5ನೇ ಪಂದ್ಯದಲ್ಲಿ ಗೆಲುವು ಸಾಧಿಸಿ ನ್ಯೂಜಿಲೆಂಡ್ ಪ್ರವಾಸಕ್ಕೆ ಗುಡ್ ಬೈ ಹೇಳಲು ಟೀಂ ಇಂಡಿಯಾ ನಿರ್ಧರಿಸಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?