
ವೆಲ್ಲಿಂಗ್ಟನ್(ಫೆ.03): ನ್ಯೂಜಿಲೆಂಡ್ ವಿರುದ್ದದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತದಿಂದ ಚೇತರಿಸಿಕೊಂಡಿದೆ. ಟ್ರೆಂಟ್ ಬೋಲ್ಟ್ ಹಾಗೂ ಮ್ಯಾಟ್ ಹೆನ್ರಿ ದಾಳಿಗೆ ತತ್ತರಿಸಿದ ಭಾರತ 18 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತ್ತು. ಆದರೆ ಅಂಬಾಟಿ ರಾಯುಡು ಹಾಗೂ ವಿಜಯ್ ಶಂಕರ್ ಹೋರಾಟದಿಂದ ಭಾರತ 100 ರನ್ ಗಡಿ ದಾಟಿತು.
ಇದನ್ನೂ ಓದಿ: 5ನೇ ಏಕದಿನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ-ತಂಡದಲ್ಲಿ 3 ಬದಲಾವಣೆ!
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ 8 ರನ್ಗಳಿಸುವಷ್ಟರಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ರೋಹಿತ್ 2 ರನ್ ಸಿಡಿಸಿ ಔಟಾದರೆ, ಶಿಖರ್ ಧವನ್ 6 ರನ್ ಸಿಡಿಸಿ ವಿಕೆಟ್ ಕೈಚೆಲಿಲ್ಲಿದರು. ಈ ಮೂಲಕ ಸತತ 2ನೇ ಹಾರಿ ಆರಂಭಿಕ ಜೋಡಿ ಅತ್ಯುಮತ್ತ ಜೊತೆಯಾಟ ನೀಡುವಲ್ಲಿ ವಿಫಲವಾಯಿತು.
ಇದನ್ನೂ ಓದಿ: ಐಪಿಎಲ್ ತಂಡದ ಆಟಗಾರರ ಒಟ್ಟು ವೇತನ-ಯಾವ ತಂಡಕ್ಕೆ ಮೊದಲ ಸ್ಥಾನ?
ಚೊಚ್ಚಲ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ಶುಭ್ಮಾನ್ ಗಿಲ್ , 2ನೇ ಪಂದ್ಯದಲ್ಲೂ ಭರವಸೆ ಮೂಡಿಸಲಿಲ್ಲ. ಇಂಜುರಿಯಿಂದ ಕಮ್ಬ್ಯಾಕ್ ಮಾಡಿದ ಎಂ.ಎಸ್.ಧೋನಿ ಕೇವಲ 1 ರನ್ ಸಿಡಿಸಿ ಔಟಾದರು. 18 ರನ್ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತಕ್ಕೆ ಅಂಬಾಟಿ ರಾಯುಡು ಹಾಗೂ ವಿಜಯ್ ಶಂಕರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ಭಾರತ 100 ರನ್ ಗಡಿ ದಾಟಿತು. ವಿಜಯ್ ಶಂಕರ್ 45 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ಈ ಮೂಲಕ ಭಾರತ 116 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.