
ದುಬೈ(ಸೆ.18): ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿರುವ ಟೀಂ ಇಂಡಿಯಾಗೆ ಇಂಜುರಿ ಆಘಾತ ಎದುರಾಗಿದೆ. 18ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯ 5ನೇ ಎಸೆತದ ಬಳಿಕ ಬೆನ್ನು ನೋವಿನಿಂದ ಕುಸಿದರು.
ತಕ್ಷಣವೇ ಟೀಂ ಇಂಡಿಯಾ ಫಿಸಿಯೋ ಮೈದಾನಕ್ಕೆ ಆಗಮಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ ತೀವ್ರ ನೋವಿನಿಂದ ಬಳಲುತ್ತಿದ್ದ ಪಾಂಡ್ಯರನ್ನ ಸ್ಟ್ರೆಚರ್ ಮೂಲಕ ಪೆವಿಲಿಯನ್ಗೆ ಕರೆದೊಯ್ಯಲಾಯಿತು.
ಪಾಂಡ್ಯ ಇಂಜುರಿ ಕುರಿತು ಬಿಸಿಸಿಐ ಟ್ವೀಟ್ ಮಾಡಿದೆ. ಟೀಂ ಇಂಡಿಯಾದ ವೈದ್ಯಕೀಯ ತಂಡ ಪಾಂಡ್ಯಾಗೆ ಚಿಕಿತ್ಸೆ ನೀಡುತ್ತಿದೆ ಎಂದಿದೆ. ಪಾಂಡ್ಯ ಬದಲಾಗಿ ಕನ್ನಡಿಗ ಮನೀಶ್ ಪಾಂಡೆ ಫೀಲ್ಡಿಂಗ್ ಮಾಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.