
ಧರ್ಮಶಾಲಾ(ಸೆ.15): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಪಂದ್ಯ ಆರಂಭಕ್ಕೂ ಮುನ್ನವೇ ಸುರಿಯುತ್ತಿರುವ ಮಳೆಯಿಂದ ಟಾಸ್ ಪ್ರಕ್ರಿಯೆ ವಿಳಂಬವಾಗಿದೆ. ಧರ್ಮಶಾಲಾದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಭಯ ತಂಡಗಳ ಅಭ್ಯಾಸಕ್ಕೂ ತೊಡಕಾಗಿತ್ತು. ಇದೀಗ ಪಂದ್ಯಕ್ಕೆ ಆರಂಭಕ್ಕೂ ಮಳೆ ಅಡ್ಡಿಯಾಗಿದೆ.
ಮಳೆಯಿಂದಾಗಿ ಮೈದಾನ ಸಂಪೂರ್ಣ ಒದ್ದೆಯಾಗಿತ್ತು. ಆದರೆ ಸಿಬ್ಬಂಧಿಗಳ ಸತತ ಪ್ರಯತ್ನದಿಂದ ಮೈದಾನ ಸಜ್ಜುಗೊಳಿಸಲಾಗಿತ್ತು. ಆದರೆ ಪಂದ್ಯ ಆರಂಭಕ್ಕೆ ಕೆಲವೇ ಕ್ಷಣಗಳಿಗೂ ಮುನ್ನ ಮತ್ತೆ ಮಳೆ ಆರಂಭಗೊಂಡಿತು. ಹೀಗಾಗಿ ಪಂದ್ಯ ಆರಂಭ ತಡವಾಗಲಿದೆ.
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಸರಣಿ ಸೆ.15 ರಿಂದ ಆರಂಭವಾಗಲಿದೆ. 3 ಟಿ20 ಹಾಗೂ 3 ಟೆಸ್ಟ್ ಪಂದ್ಯದ ಸರಣಿಗಾಗಿ ಸೌತ್ ಆಫ್ರಿಕಾ, ಭಾರತಕ್ಕೆ ಆಗಮಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.