
ಬೆಂಗಳೂರು(ಸೆ.21): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟ20 ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಕೊಹ್ಲಿ ಪಡೆಗೆ ಸರಣಿ ಗೆಲುವಿನ ತವಕ. ಇತ್ತ ಸೌತ್ ಆಫ್ರಿಕಾ ಸರಣಿ ಸಮಬಲ ಮಾಡಿಕೊಳ್ಳಲು ತಯಾರಾಗಿದೆ. ಈ ಮಹತ್ವದ ಪಂದ್ಯಕ್ಕೆ ಇದೀಗ ಆತಂಕ ಎದುರಾಗಿದೆ.
ಇದನ್ನೂ ಓದಿ: ಅಂತಿಮ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ..?
ಧರ್ಮಶಾಲಾ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯ ಫಲಿತಾಂಶ ಕಾಣದೆ ರದ್ದಾಗಿತ್ತು. ಇದೀಗ ಬೆಂಗಳೂರು ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ಸೆ.22 ರಂದು ನಡೆಯಲಿರುವ ಬೆಂಗಳೂರು ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಎಂದು ಹವಾಮಾನ ವರದಿ ಹೇಳುತ್ತಿದೆ.
ಇದನ್ನೂ ಓದಿ: ಚಿನ್ನಸ್ವಾಮಿಗಿಲ್ಲ ಇನ್ನು ವರುಣನ ಕಾಟ
ಭಾನುವಾರ ಬೆಂಗಳೂರಲ್ಲಿ ಗುಡುಗು ಸಹಿತ ತುಂತುರ ಮಳೆಯಾಗಲಿದೆ ಅನ್ನೋ ಹವಾಮಾನ ವರದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಲ್ಲಿ ವಿಶ್ವದರ್ಜೆಯ ಸಬ್ ಏರ್ ಸಿಸ್ಟಮ್ ಇರುವುದರಿಂದ ಅದೆಷ್ಟೇ ಮಳೆ ಸುರಿದರೂ 5 ನಿಮಿಷದಲ್ಲಿ ಮೈದಾನದವನ್ನು ಆಟಕ್ಕೆ ಸಜ್ಜುಗೊಳಿಸುವ ವ್ಯವಸ್ಥೆ ಇದೆ. ಆದರೆ ಮಳೆ ಅನುವು ಮಾಡಿಕೊಡಬೇಕು ಅಷ್ಟೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.