
ಧರ್ಮಶಾಲಾ(ಸೆ.15): ವೆಸ್ಟ್ ಇಂಡೀಸ್ ಸರಣಿಯಲ್ಲಿ ಭರ್ಜರಿ ಗೆಲುವಿನ ಬಳಿಕ ಇದೀಗ ಟೀಂ ಇಂಡಿಯಾ ಮತ್ತೊಂದು ಮಹತ್ವದ ಸರಣಿಗೆ ರೆಡಿಯಾಗಿದೆ. ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ಇಂದಿನಿಂದ(ಸೆ.15) ಆರಂಭಗೊಳ್ಳುತ್ತಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿದೆ. ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದರ ಜೊತೆಗೆ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆಯಿಲಿದ್ದಾರೆ ಅನ್ನೋ ಕುತೂಹಲ ಕೂಡ ಹೆಚ್ಚಾಗಿದೆ.
ಇದನ್ನೂ ಓದಿ: ಇಂದು ಇಂಡೋ-ಆಫ್ರಿಕಾ ಮೊದಲ ಟಿ20 ಕದನ
ಭಾರತ ಸಂಭನೀಯ ತಂಡ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್ ಹಾಗೂ ನವದೀಪ್ ಸೈನಿ
ಇದನ್ನೂ ಓದಿ: ಭಾರತ-ಸೌತ್ ಆಫ್ರಿಕಾ ಸರಣಿ; ಯಾರು ಮರೆತಿಲ್ಲ 4 ಅತಿ ದೊಡ್ಡ ವಿವಾದ!
ಸಂಭನೀಯ ತಂಡದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಕಣಕ್ಕಿಳಿಯಲಿದ್ದಾರೆ. ಕನ್ನಡಿಗ ಹೀಗಾಗಿ ಕೆಎಲ್ ರಾಹುಲ್ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಮತ್ತೊರ್ವ ಕನ್ನಡಿಗ ಮನೀಶ್ ಪಾಂಡೆಗೆ ಸ್ಥಾನ ಸಿಗಲಿದೆಯೇ ಅನ್ನೋ ಕುತೂಹಲ ಕಾಡುತ್ತಿದೆ.
ಬೌಲಿಂಗ್ ವಿಭಾಗದಲ್ಲಿ ನವದೀಪ್ ಸೈನಿ, ಹಾಗೂ ದೀಪರ್ ಚಹಾರ್ ವೇಗದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಆಲ್ರೌಂಡರ್ ಕೋಟಾದಡಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವಕಾಶ ಗಿಟ್ಟಿಸಿಕೊಳ್ಳಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.