
ಬೆಂಗಳೂರು(ಸೆ.08): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲಿದೆ. ಸೆ. 22ರಂದು ನಡೆಯಲಿರುವ ಪಂದ್ಯದ ಟಿಕೆಟ್’ಗಳು ಕೌಂಟರ್’ನಲ್ಲಿ ಸೆಪ್ಟೆಂಬರ್ 16ರಿಂದ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತಿಳಿಸಿದೆ.
ಭಾರತಕ್ಕೆ ಬಂದಿಳಿದ ದಕ್ಷಿಣ ಆಫ್ರಿಕಾ ತಂಡ
ಹೌದು, ಕೊನೆಯ ಟಿ20 ಪಂದ್ಯದ ಟಿಕೆಟನ್ನು ಸೆ.16 ರಂದು ಬೆಳಗ್ಗೆ 10 ಗಂಟೆಗೆ ಕೌಂಟರ್ನಲ್ಲಿ ಮಾರಾಟ ಮಾಡಲಾಗುತ್ತದೆ. 5000 ರುಪಾಯಿಗಳಿಗಿಂತ ಹೆಚ್ಚಿನ ಬೆಲೆಯ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಕೊಂಡುಕೊಳ್ಳಬೇಕು. https://www.ksca.cricket ಮೂಲಕ ಟಿಕೆಟ್ ಪಡೆಯಬಹುದಾಗಿದೆ. ಕನಿಷ್ಠ 500 ರುಪಾಯಿಂದ ಗರಿಷ್ಠ 10,000 ಬೆಲೆಯ ಟಿಕೆಟ್ಗಳು ದೊರೆಯಲಿವೆ.
ಮತ್ತೆ ಟೀಂ ಇಂಡಿಯಾ ಕಾಲೆಳೆದ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್..!
ಜಿ ಅಪ್ಪರ್, ಲೋವರ್ 1 ಹಾಗೂ 2 ಸ್ಟ್ಯಾಂಡ್ನ 500 ರುಪಾಯಿ ಬೆಲೆಯ ಟಿಕೆಟ್ಗಳನ್ನು ಕ್ರೀಡಾಂಗಣದ ಗೇಟ್ ನಂ.2 ರಲ್ಲಿ ಮಾರಾಟ ಮಾಡಲಾಗುವುದು ಎಂದು ಕೆಎಸ್ಸಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.