
ಮುಂಬೈ(ಅ.13): ಭಾರತ-ವೆಸ್ಟ್ಇಂಡೀಸ್ ನಡುವಿನ 4ನೇ ಏಕದಿನ ಪಂದ್ಯ ವಾಂಖೇಡೆ ಕ್ರೀಡಾಂಗಣದಿಂದ ಇಲ್ಲಿನ ಬ್ರೇಬೊರ್ನ್ ಕ್ರೀಡಾಂಗಣಕ್ಕೆ ಸ್ಥಳಾಂತರಗೊಂಡಿದೆ. ಪಂದ್ಯ ಅ.29ರಂದು ನಡೆಯಲಿರುವ ಪಂದ್ಯದ ಸ್ಥಳಾಂತರಕ್ಕೆ ಬಿಸಿಸಿಐ ತಾಂತ್ರಿಕ ಸಮಸ್ಯೆಯ ಕಾರಣ ನೀಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಯೋಜಿಸಲು ಸೂಕ್ತ ಅಧಿಕಾರಿಗಳಿಲ್ಲ. ಪಂದ್ಯದದ ಉಸ್ತುವಾರಿ, ಹಣಕಾಸು ಸೇರಿದಂತೆ ಹಲವು ವಿಚಾಗಳ ಮೇಲುಸ್ತುವಾರಿಗೆ ಯಾವುದೇ ಅಧಿಕಾರಿಗಳಿಲ್ಲ ಎಂದು ಮಂಬೈ ಕ್ರಿಕೆಟ್ ಸಂಸ್ಥೆ ಹೇಳಿತ್ತು. ಇದರ ಬೆನ್ನಲ್ಲೇ ಪಂದ್ಯವನ್ನ ಸ್ಥಳಾಂತರಗೊಳಿಸಲಾಗಿದೆ.
ಹಣಕಾಸಿನ ನಿರ್ಬಂಧಗಳಿಂದಾಗಿ ಪಂದ್ಯಕ್ಕೆ ಆತಿಥ್ಯ ವಹಿಸುವುದು ಅಸಾಧ್ಯ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ(ಎಂಸಿಎ) ಅಧಿಕಾರಿಗಳು ಈ ಹಿಂದೆಯೇ ತಿಳಿಸಿದ್ದರು. ಈ ವರ್ಷದ ಆರಂಭದಲ್ಲಿ ಬಾಂಬೆ ಹೈಕೋರ್ಟ್ ಎಂಸಿಎಗೆ ಇಬ್ಬರು ನಿವೃತ್ತಿ ನ್ಯಾಯಾಧೀಶರನ್ನು ಆಡಳಿತಗಾರರನ್ನಾಗಿ ನೇಮಿಸಿತ್ತು. ಸೆ.14ರಂದು ಈ ಇಬ್ಬರು ಅಧಿಕಾರಿ ತ್ಯಜಿಸಿದ್ದರು. ಆ ಬಳಿಕ ಎಂಸಿಎ ಬ್ಯಾಂಕ್ ಖಾತೆಗಳನ್ನು ಯಾರು ನಿರ್ವಹಿಸಬೇಕು ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲದ ಕಾರಣ ಪಂದ್ಯ ಆಯೋಜನೆ ಅಸಾಧ್ಯ ಎಂದು ಎಂಸಿಎ ಅಧಿಕಾರಿಗಳು ಬಿಸಿಸಿಐಗೆ ವಿವರಣೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.