
ತಿರುವನಂತಪುರಂ(ಅ.31): ವೆಸ್ಟ್ ಇಂಡೀಸ್ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿ ಅಂತಿಮ ಘಟ್ಟ ತಲುಪಿದೆ. ನಾಳೆ(ನ.01)ರಂದು ನಡೆಯಲಿರುವ ಅಂತಿಮ ಏಕದಿನ ಪಂದ್ಯ ಗೆದ್ದು ಸರಣಿ ಗೆಲುವಿಗೆ ಟೀಂ ಇಂಡಿಯಾ ಸಜ್ಜಾಗಿದ್ದರೆ, ಅತ್ತ ವಿಂಡೀಸ್ ಸರಣಿ ಉಳಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ.
4ನೇ ಏಕದಿನ ಪಂದ್ಯದಲ್ಲಿ224 ರನ್ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಇದೀಗ 5ನೇ ಪಂದ್ಯದಲ್ಲೂ ಗೆಲುವಿನ ವಿಶ್ವಾಸದಲ್ಲಿದೆ. 2-1 ಅಂತರದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ತಿರುವನಂತಪರುಂನ ಗ್ರೀನ್ಫೀಲ್ಡ್ ಕ್ರೀಡಾಂಗಣ ಇದೇ ಮೊದಲ ಬಾರಿಗೆ ಏಕದಿನ ಪಂದ್ಯ ಆಯೋಜಿಸುತ್ತಿದೆ. ಹೀಗಾಗಿ ಪಿಚ್ ಕುತೂಹಲ ಉಭಯ ತಂಡಗಳಿಗೂ ಇದೆ.
ತಂಡದಲ್ಲಿ ಕೆಲ ಬದಲಾವಣೆ ಮಾಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿ ಕನ್ನಡಿಗ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಸೋ ಸಾಧ್ಯತೆ ಇದೆ. ಆದರೆ ಮಹತ್ವದ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮನಸ್ಸು ಮಾಡಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ.
ರೋಹಿತ್ ಬದಲು ರಾಹುಲ್ ಕಣಕ್ಕಿಳಿದರೆ, ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನುಳಿದಂತೆ ನಾಯಕ ವಿರಾಟ್ ಕೊಹ್ಲಿ ಅಂಬಾಟಿ ರಾಯುಡು, ಎಂ.ಎಸ್.ಧೋನಿ, ಕೇದಾರ್ ಜಾದವ್ , ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಖಲೀಲ್ ಅಹಮ್ಮದ್ ಸ್ಥಾನ ಪಡೆಯಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.