
ಚೆನ್ನೈ(ನ.11): ವೆಸ್ಟ್ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಕೊನೆಯ ಎಸೆತದಲ್ಲಿ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನ 3-0 ಅಂತರದಲ್ಲಿ ಗೆದ್ದುಕೊಂಡಿದೆ. ಇಷ್ಟೇ ಅಲ್ಲ ಸರಣಿ ಕ್ಲೀನ್ ಸ್ವೀಪ್ ಮಾಡಿದ ಸಾಧನೆ ಮಾಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ನಿಕೋಲಾಸ್ ಪೂರನ್ ಅಜೇಯ 53, ಡರೆನ್ ಬ್ರಾವೋ ಅಜೇಯ 43 ರನ್ ಸಿಡಿಸಿದರು. ಈ ಮೂಲಕ ವಿಂಡೀಸ್ 3 ವಿಕೆಟ್ ನಷ್ಟಕ್ಕೆ 181 ರನ್ ಸಿಡಿಸಿತು.
182 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ ಆರಂಭದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ರೋಹಿತ್ 4 ರನ್ ಸಿಡಿಸಿ ಔಟಾದರು. ಇನ್ನು ಕೆಎಲ್ ರಾಹುಲ್ 17 ರನ್ ಸಿಡಿಸಿ ನಿರ್ಗಮಿಸಿದರು. ಆದರೆ ಶಿಖರ್ ಧವನ್ ಹಾಗೂ ರಿಷಬ್ ಪಂತ್ ಅಬ್ಬರಿಸಿದರು.
ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಶಿಖರ್ ಧವನ್ ಅರ್ಧಶತಕ ಸಿಡಿಸಿ ಮಿಂಚಿದರು. ಇತ್ತ ಧವನ್ಗೆ ಉತ್ತಮ ಸಾಥ್ ನೀಡಿದ ಪಂತ್ ಹಾಫ್ ಸೆಂಚುರಿ ಭಾರಿಸಿದರು. ಈ ಮೂಲಕ ಮೊದಲ ಅರ್ಧಶತಕದ ಸಂಭ್ರಮ ಆಚರಿಸಿದರು.
ರಿಷಬ್ ಪಂತ್ 58 ರನ್ ಸಿಡಿಸಿ ಔಟಾದರು. ಗೆಲವಿಗೆ ಇನ್ನು 1 ರನ್ ಬೇಕಿರುವಾಗ 92 ರನ್ ಸಿಡಿಸಿದ ಧವನ್ ವಿಕೆಟ್ ಪತನಗೊಂಡಿತು. ಈ ಮೂಲಕ ಅಭಿಮಾನಿಗಳ ಆತಂಕ ಹೆಚ್ಚಾಾಯಿತು. ಅಂತಿಮ ಎಸೆತದಲ್ಲಿ ಮನೀಶ್ ಪಾಂಡೆ ಗೆಲುವಿನ ರನ್ ಸಿಡಿಸಿ ಆತಂಕ ದೂರ ಮಾಡಿದರು. ಈ ಮೂಲಕ ಭಾರತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇಷ್ಟೇ ಅಲ್ಲ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಗೆದ್ದು ಕ್ಲೀನ್ ಸ್ವೀಪ್ ಮಾಡಿಕೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.