
ಫ್ಲೋರಿಡಾ(ಆ.05): ವೆಸ್ಟ್ ಇಂಡೀಸ್ ವಿರುದ್ಧದ ಆರಂಭಿಕ 2 ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 3ನೇ ಪಂದ್ಯಕ್ಕಾಗಿ ಅಮೆರಿಕಾದಿಂದ ವೆಸ್ಟ್ ಇಂಡೀಸ್ಗೆ ಪ್ರಯಾಣ ಬೆಳೆಸಿದೆ. ಈಗಾಗಲೇ ಸರಣಿ ಕೈವಶ ಮಾಡಿರುವ ಟೀಂ ಇಂಡಿಯಾ ಅಂತಿಮ ಪಂದ್ಯಕ್ಕೆ ಕೆಲ ಬದಲಾವಣೆ ಮಾಡೋ ಸಾಧ್ಯತೆ ಹೆಚ್ಚಿದೆ. ಈ ಮೂಲಕ ಬೆಂಚ್ ಸ್ಟ್ರೆಂಥ್ ಪರೀಕ್ಷಿಸಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ.
ಇದನ್ನೂ ಓದಿ: ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿ ಕೈವಶ ಮಾಡಿದ ಭಾರತ
ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಾಹುಲ್ ಚಹಾರ್ ಹಾಗೂ ದೀಪಕ್ ಚಹಾರ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ ಬೌಲಿಂಗ್ನಲ್ಲಿ ಬದಲಾವಣೆ ಮಾಡಿದರೆ ಚಹಾರ್ ಬ್ರದರ್ಸ್ಗೆ ಸ್ಛಾನ ಸಿಗಲಿದೆ. ಇತ್ತ ಬ್ಯಾಟಿಂಗ್ನಲ್ಲಿ ಬದಲಾವಣೆ ಮಾಡಿದರೆ ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್ ಸ್ಥಾನ ಪಡೆಯಲಿದ್ದಾರೆ. ಕೊಹ್ಲಿ ಕೆಲ ಬದಲಾವಣೆ ಮಾಡೋ ಸಾಧ್ಯತೆ ಇದೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಹೈಅಲರ್ಟ್; ಕಣಿವೆ ರಾಜ್ಯ ತೊರೆಯಲು ಇರ್ಫಾನ್ಗೆ ಸೂಚನೆ!
ಆರಂಭಿಕ 2 ಪಂದ್ಯ ಅಮೆರಿಕದ ಫ್ಲೋರಿಡಾದಲ್ಲಿ ಆಯೋಜಿಸಲಾಗಿತ್ತು. ಇದೀಗ ಪಂದ್ಯಗಳು ವೆಸ್ಟ್ ಇಂಡೀಸ್ಗೆ ಸ್ಥಳಾಂತರಗೊಂಡಿದೆ. 3ನೇ ಹಾಗೂ ಅಂತಿಮ ಟಿ20 ಪಂದ್ಯ ಗಯಾನದಲ್ಲಿ ಆಯೋಜಿಸಲಾಗಿದೆ. ಆಗಸ್ಟ್ 6 ರಂದು 3ನೇ ಚುಟುಕು ಸಮರ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.