ಟೀಂ ಇಂಡಿಯಾ ಆಸೀಸ್'ಗೆ ತಿರುಗೇಟು ನೀಡಲಿದೆ

Published : Mar 02, 2017, 04:18 PM ISTUpdated : Apr 11, 2018, 01:13 PM IST
ಟೀಂ ಇಂಡಿಯಾ ಆಸೀಸ್'ಗೆ ತಿರುಗೇಟು ನೀಡಲಿದೆ

ಸಾರಾಂಶ

ಬೆಂಗಳೂರಿನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಲಿದೆ ಎಂದು ದಾದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ(ಮಾ.02): ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಟೆಸ್ಟ್‌'ನಲ್ಲಿ ಭಾರತ ತಂಡ ಹೀನಾಯ ಸೋಲನುಭವಿಸಿದ್ದರೂ, ಬೆಂಗಳೂರಿನಲ್ಲಿ ಶನಿವಾರದಿಂದ ಆರಂಭವಾಗಲಿರುವ ಎರಡನೇ ಟೆಸ್ಟ್‌ನಲ್ಲಿ ತಿರುಗೇಟು ನೀಡುವುದರೊಂದಿಗೆ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಪುಟಿದೇಳಲಿದೆ ಎಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

‘‘ಕಳೆದ ಹತ್ತು ತಿಂಗಳಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಅತ್ಯಮೋಘ ಪ್ರದರ್ಶನ ನೀಡಿದೆ. ಹಲವು ತಂಡಗಳು ಅನುಭವಿಸಿದಂತೆ ಭಾರತ ಕೂಡ ತವರಿನಲ್ಲಿ ಸೋಲನುಭವಿಸಿದೆ. ಆದರೆ, ಪುಣೆಯಲ್ಲಿನ ಸೋಲನ್ನು ಮೆಟ್ಟಿನಿಲ್ಲುವಷ್ಟು ಸಾಮರ್ಥ್ಯ ಆತಿಥೇಯ ತಂಡಕ್ಕಿದೆ’’ ಎಂದು ಗಂಗೂಲಿ ಪ್ರತಿಪಾದಿಸಿದ್ದಾರೆ.

ಬೆಂಗಳೂರಿನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ ಕಮ್ ಬ್ಯಾಕ್ ಮಾಡಲಿದೆ ಎಂದು ದಾದಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೀದಿಗೆ ಬಿದ್ದ ಬಾಕ್ಸರ್‌ ಮೇರಿ ಕೋಮ್‌ ದಾಂಪತ್ಯ ಕಲಹ; ಆಕೆಗೆ ಆ ಇಬ್ಬರ ಜತೆ ಅಕ್ರಮ ಸಂಬಂಧವಿತ್ತು ಎಂದ ಮಾಜಿ ಪತಿ!
ಸ್ವಹಿತಾಸಕ್ತಿ ಸಂಘರ್ಷ ಸುಳಿಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್!