ಅರ್ಜುನ್‌ ವಿಜೇತ ಪ್ಯಾರಾ ಬ್ಯಾಡ್ಮಿಂಟನ್‌ ಪಟು ರಮೇಶ್‌ ಕೋವಿಡ್‌ಗೆ ಬಲಿ

Suvarna News   | Asianet News
Published : Jul 17, 2020, 01:03 PM IST
ಅರ್ಜುನ್‌ ವಿಜೇತ ಪ್ಯಾರಾ ಬ್ಯಾಡ್ಮಿಂಟನ್‌ ಪಟು ರಮೇಶ್‌ ಕೋವಿಡ್‌ಗೆ ಬಲಿ

ಸಾರಾಂಶ

ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ರಮೇಶ್ ಅವರನ್ನು ಜೂ.29ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಪರೀಕ್ಷಿಸಲಾಗಿತ್ತು. ಈ ವೇಳೆ ಅವರಿಗೆ ಸೋಂಕು ಇರುವುದು ಖಚಿತವಾಗಿತ್ತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.17): ಅರ್ಜುನ ಪ್ರಶಸ್ತಿ ವಿಜೇತ ಪ್ಯಾರಾ- ಬ್ಯಾಡ್ಮಿಂಟನ್‌ ಆಟಗಾರ ರಮೇಶ್‌ ಟಿಕಾರಾಮ್‌ ಗುರುವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಭಾರತ ಪ್ಯಾರಾ ಬ್ಯಾಡ್ಮಿಂಟನ್‌ ಸಂಸ್ಥೆ ಅಧ್ಯಕ್ಷ ಎನ್‌ ಸಿ. ಸುಧೀರ್‌ ಈ ವಿಷಯವನ್ನು ಖಚಿತಪಡಿ​ಸಿ​ದ್ದಾರೆ. 

ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ಜೂ.29ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಪರೀಕ್ಷಿಸಲಾಗಿತ್ತು. ಈ ವೇಳೆ ಅವರಿಗೆ ಸೋಂಕು ಇರುವುದು ಖಚಿತವಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. 

ಕೋವಿಡ್‌ ಆಸ್ಪತ್ರೇಲಿ ಲೋಪ: ಅಧಿಕಾರಿಗಳ ವಿರುದ್ಧ ಸಚಿವ ಸುಧಾಕರ್‌ ಗರಂ

2001ರ ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವಲ್ಲಿ ರಮೇಶ್ ಟಿಕಾರಾಮ್‌ ಮುಖ್ಯ ಭೂಮಿಕೆ ನಿಭಾಯಿಸಿದ್ದರು. ರಮೇಶ್ ಟಿಕಾರಾಮ್‌ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

2002ರಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಂದ ರಮೇಶ್ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ರಮೇಶ್ ಟಿಕಾರಾಮ್ ನಿಧನಕ್ಕೆ ಕ್ರೀಡಾಸಚಿವ ಕಿರಣ್ ರಿಜಿಜು ಸಂತಾಪ ಸೂಚಿಸಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!
ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!