ಭಾರತೀಯ ಸೇನೆಗಾಗಿ ವಿಶ್ವಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ವಿರಾಟ್ ಕೊಹ್ಲಿ

Published : May 22, 2019, 11:07 AM IST
ಭಾರತೀಯ ಸೇನೆಗಾಗಿ ವಿಶ್ವಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ವಿರಾಟ್ ಕೊಹ್ಲಿ

ಸಾರಾಂಶ

ವಿರಾಟ್‌, ‘ಹಲವು ಮೂಲಗಳಿಂದ ಸ್ಫೂರ್ತಿ ದೊರೆಯುತ್ತದೆ. ಆದರೆ ಭಾರತೀಯ ಸೇನೆಯಿಂದ ಸಿಗುವಷ್ಟು ದೊಡ್ಡ ಸ್ಫೂರ್ತಿ ಬೇರೆಡೆಯಿಂದ ಸಿಗುವುದಿಲ್ಲ, ಭಾರತೀಯ ಸೇನೆಗಾಗಿ ಈ ಬಾರಿಯ ವಿಶ್ವಕಪ್ ಗೆಲ್ಲುವುದಾಗಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿಶ್ವಕಪ್ ಟೂರ್ನಿಗೂ ಮುನ್ನ ಕೊಹ್ಲಿ ಸುದ್ದಿಗಾರರ ಜತೆ ಮಾತನಾಡಿದ್ದಿಷ್ಟು... 

ಮುಂಬೈ[ಮೇ.22]: ಬಹು ನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್‌ಗೆ ಕೆಲವೇ ದಿನಗಳು ಬಾಕಿ ಇದ್ದು, ಬುಧವಾರ ಭಾರತ ಕ್ರಿಕೆಟ್‌ ತಂಡ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ. ಮಂಗಳವಾರ ಇಲ್ಲಿನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಾಯಕ ವಿರಾಟ್‌ ಕೊಹ್ಲಿ ಹಾಗೂ ಕೋಚ್‌ ರವಿಶಾಸ್ತ್ರಿ ಸುದ್ದಿಗೋಷ್ಠಿ ನಡೆಸಿ, ವಿಶ್ವಕಪ್‌ ಸಿದ್ಧತೆ ಬಗ್ಗೆ ಮಾತನಾಡಿದರು.

ಭಾರತೀಯ ಸೇನೆಯಿಂದ ತಂಡ ಹೇಗೆ ಸ್ಫೂರ್ತಿಗೊಂಡಿದೆ ಎನ್ನುವ ಬಗ್ಗೆ ವಿವರಿಸಿದ ವಿರಾಟ್‌, ‘ಹಲವು ಮೂಲಗಳಿಂದ ಸ್ಫೂರ್ತಿ ದೊರೆಯುತ್ತದೆ. ಆದರೆ ಭಾರತೀಯ ಸೇನೆಯಿಂದ ಸಿಗುವಷ್ಟು ದೊಡ್ಡ ಸ್ಫೂರ್ತಿ ಬೇರೆಡೆಯಿಂದ ಸಿಗುವುದಿಲ್ಲ. ದೇಶಕ್ಕಾಗಿ ಸೈನಿಕರು ದುಡಿಯವುದರ ಜತೆ ಬೇರಾರ‍ಯವುದನ್ನೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಸೇನೆಗಾಗಿ ಏನಾದರೂ ಮಾಡಬೇಕು ಎನ್ನುವ ಮನಸ್ಥಿತಿಯಿಂದ ಹೋದರೆ ನಮ್ಮ ಪ್ರದರ್ಶನ ಗುಣಮಟ್ಟದಲ್ಲಿ ಸುಧಾರಣೆ ಕಾಣಲಿದೆ. ಪ್ರತಿಯೊಬ್ಬರಿಗೂ ವಿಶ್ವಕಪ್‌ನಲ್ಲಿ ಆಡಲು ಹಲವು ರೀತಿಯಲ್ಲಿ ಸ್ಫೂರ್ತಿಗೊಂಡಿರುತ್ತಾರೆ. ಆದರೆ ಸೇನೆಯನ್ನು ಗಮನದಲ್ಲಿಟ್ಟುಕೊಂಡು ಆಡುವಾಗ ಉತ್ಸಾಹ ಮತ್ತಷ್ಟುಹೆಚ್ಚಲಿದೆ’ ಎಂದರು.

ಇದು ಕಠಿಣ ವಿಶ್ವಕಪ್‌: ರೌಂಡ್‌ ರಾಬಿನ್‌ ಮಾದರಿಯಲ್ಲಿ ಟೂರ್ನಿ ನಡೆಯಲಿರುವ ಕಾರಣ, ಇದು ಅತ್ಯಂತ ಕಠಿಣ ಟೂರ್ನಿ ಎನಿಸಿದೆ ಎಂದು ವಿರಾಟ್‌ ಹೇಳಿದರು. ‘ವಿಶ್ವಕಪ್‌ನಲ್ಲಿ ಆಡಲಿರುವ ಎಲ್ಲಾ 10 ತಂಡಗಳು ಬಲಿಷ್ಠವಾಗಿವೆ. ಕಳೆದ ಕೆಲ ವರ್ಷಗಳಲ್ಲಿ ಆಷ್ಘಾನಿಸ್ತಾನ ತೋರಿರುವ ಪ್ರದರ್ಶನವನ್ನು ಯಾರೂ ಕಡೆಗಣಿಸಲು ಸಾಧ್ಯವಿಲ್ಲ. ತಂಡಕ್ಕೆ ಹಾಗೂ ವೈಯಕ್ತಿಕವಾಗಿ ನನಗೂ ಇದು ಕಠಿಣ ಟೂರ್ನಿ’ ಎಂದು ಕೊಹ್ಲಿ ಹೇಳಿದರು.

ವಿಶ್ವಕಪ್‌ಗೂ ಮುನ್ನ ಐಪಿಎಲ್‌ನಲ್ಲಿ ಆಡಿದ್ದರಿಂದ ಆಟಗಾರರು ದಣಿದಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ‘ವಿಶ್ವದ ಅಗ್ರ ಫುಟ್ಬಾಲ್‌ ತಂಡಗಳು ಸತತವಾಗಿ ಮೂರ್ನಾಲ್ಕು ತಿಂಗಳುಗಳ ಕಾಲ ಟೂರ್ನಿಗಳಲ್ಲಿ ಆಡುತ್ತವೆ. ಅವರಂತೆಯೇ ನಾವೂ ಸಹ ವೃತ್ತಿಪರ ಕ್ರೀಡಾಪಟುಗಳು. ವಿಶ್ವಕಪ್‌ಗೂ ಮುನ್ನ ಐಪಿಎಲ್‌ ನಡೆದಿದ್ದು ಅಗತ್ಯ ಸಿದ್ಧತೆ ನಡೆಸಲು ಅನುಕೂಲವೇ ಆಗಿದೆ’ ಎಂದರು.

ಧೋನಿ ಪಾತ್ರ ನಿರ್ಣಾಯಕ: ವಿಶ್ವಕಪ್‌ಗೆ ನಡೆಸಿರುವ ಸಿದ್ಧತೆ, ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಕೋಚ್‌ ರವಿಶಾಸ್ತ್ರಿ ವಿವರಿಸಿದರು. ‘ಕೊನೆ 10 ಓವರ್‌ಗಳಲ್ಲಿ ಯಾರು ಹೇಗೆ ಆಡುತ್ತಾರೆ ಎನ್ನುವುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ. ಹೀಗಾಗಿ ಅದಕ್ಕೆ ಬೇಕಿರುವ ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ಎಂ.ಎಸ್‌.ಧೋನಿಯ ಪಾತ್ರ ನಿರ್ಣಾಯಕವಾಗಲಿದೆ. ಐಪಿಎಲ್‌ನಲ್ಲಿ ಅವರು ಉತ್ತಮ ಲಯ ಪ್ರದರ್ಶಿಸಿದರು. ಅದೇ ಲಯ ಕಾಯ್ದುಕೊಂಡು ವಿಶ್ವಕಪ್‌ನಲ್ಲೂ ಆಡುವ ವಿಶ್ವಾಸದಲ್ಲಿದ್ದಾರೆ’ ಎಂದು ಶಾಸ್ತ್ರಿ ಹೇಳಿದರು.
 

ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana