
ಮುಂಬೈ(ಮಾ.28): ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದ ಟೀಂ ಇಂಡಿಯಾ ಸದಸ್ಯರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಲಾ ₹ 50 ಲಕ್ಷ ಬಹುಮಾನ ಘೋಷಿಸಿದೆ.
ಇನ್ನು ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ 25 ಲಕ್ಷ ರೂಪಾಯಿ ಪಡೆದರೆ, ತಂಡದ ಬೆಂಬಲಿತ ಸಿಬ್ಬಂದಿ ತಲಾ 15 ಲಕ್ಷ ರೂಪಾಯಿ ಬಹುಮಾನಕ್ಕೆ ಭಾಜನವಾಗಿದೆ.
ಇಂದು ಮುಕ್ತಾಯ ಕಂಡ ನಾಲ್ಕನೇ ಟೆಸ್ಟ್ನಲ್ಲಿ 8 ವಿಕೆಟ್ ಗೆಲುವಿನೊಂದಿಗೆ 2-1ರಿಂದ ಸರಣಿ ಜಯಿಸಿದ ಭಾರತ ತಂಡ ಆ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಟ್ರೋಫಿಯನ್ನೂ ತನ್ನದಾಗಿಸಿಕೊಂಡಿತು.
ಏತನ್ಮಧ್ಯೆ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಭಾರತ ತಂಡ, ಐಸಿಸಿ ಕೊಡಮಾಡುವ ₹ 6.5 ಕೋಟಿ ನಗದು ಪುರಸ್ಕಾರಕ್ಕೂ ಭಾಜನವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.