
ಅಬುಧಾಬಿ[ಜ.09]: ಅಭ್ಯಾಸದ ವೇಳೆ ಶಿಸ್ತು ನಿಯಮ ಉಲ್ಲಂಘನೆ ಮಾಡಿದ್ದ ಭಾರತ ಫುಟ್ಬಾಲ್ ತಂಡದ ಆಟಗಾರರರಿಂದ ದಂಡವಾಗಿ ಸಂಗ್ರಹಿಸಿದ್ದ 50,000 ಹಣವನ್ನು ಭಾರತೀಯ ಅಂಧರ ಫುಟ್ಬಾಲ್ ಫೆಡರೇಷನ್(ಐಬಿಎಫ್ಎಫ್)ಗೆ ನೀಡಲು ತಂಡ ನಿರ್ಧರಿಸಿದೆ.
ಎಎಫ್ಸಿ ಏಷ್ಯನ್ ಕಪ್ ಫುಟ್ಬಾಲ್: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 4-1 ಜಯ
ಆಟಗಾರರು ಅಭ್ಯಾಸಕ್ಕೆ ತಡವಾಗಿ ಬರುವುದು, ಊಟದ ವೇಳೆ ಮೊಬೈಲ್ ತರುವುದು ಮತ್ತು ಅನುಮತಿಯಿಲ್ಲದ ಬಟ್ಟೆಗಳನ್ನು ಧರಿಸುವುದು ಇಂತಹ ನಿಯಮಗಳನ್ನು ಉಲ್ಲಂಘನೆ ಮಾಡಿದಾಗ ಆಟಗಾರರಿಂದ ಸಣ್ಣ ಪ್ರಮಾಣದಲ್ಲಿ ದಂಡ ಸಂಗ್ರಹಿಸಲಾಗುತ್ತಿತ್ತು. ಈ ರೀತಿಯಲ್ಲಿ ಸಂಗ್ರಹವಾದ ಹಣವನ್ನು ಭಾರತ ಫುಟ್ಬಾಲ್ ತಂಡ, ಫುಟ್ಬಾಲ್ಗಳನ್ನು ಖರೀದಿಸಲು ಐಬಿಎಫ್ಎಫ್ಗೆ ದಾನವಾಗಿ ನೀಡಲು ನಿರ್ಧರಿಸಿದೆ.
ಇದೀಗ ಸುನಿಲ್ ಚೆಟ್ರಿ ನೇತೃತ್ವದ ಭಾರತ ಫುಟ್ಬಾಲ್ ತಂಡ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದು, ಮೊದಲ ಪಂದ್ಯದಲ್ಲಿ ಥಾಯ್ಲೆಂಡ್ ತಂಡವನ್ನು ಮಣಿಸಿ ಶುಭಾರಂಭ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.