
ಬೆಂಗಳೂರು(ಏ.08): ಐಪಿಎಲ್ ನಡೆಯುವ ಎಲ್ಲಾ 8 ನಗರಗಳಲ್ಲೂ ಉದ್ಘಾಟನಾ ಸಮಾರಂಭ ನಡೆಸುವ ಬಿಸಿಸಿಐ ತೀರ್ಮಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶುಕ್ರವಾರ ರಾಜ್'ಕೋಟ್'ನಲ್ಲಿ ಟೈಗರ್ ಶ್ರಾಫ್ ಪ್ರದರ್ಶನವನ್ನು ಪ್ರೇಕ್ಷಕರು ಕಣ್ತುಂಬಿಕೊಂಡಿದ್ದರು.
ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶ್ರಾಫ್ ಅವರ ಮೊದಲ ಚಿತ್ರ 'ಹೀರೋಪಂತಿ'ಯ ನಾಯಕಿ ಕೃತಿ ಸನೊನ್ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಇದಕ್ಕಾಗಿ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 50ಕ್ಕೂ ಹೆಚ್ಚು ಸಹನೃತ್ಯಗಾರರೊಂದಿಗೆ ಹೆಜ್ಜೆಹಾಕಿ ಉದ್ಘಾಟನಾ ಸಮಾರಂಭಕ್ಕೆ ತಾಲೀಮು ನಡೆಸಿದರು.
ಕೃತಿ ಸನೊನ್ ಮಾತ್ರವಲ್ಲದೇ ಖ್ಯಾತ ಗಾಯಕ ಬೆನ್ನಿ ದಯಾಳ್ ಅವರ ಗಾನಸುಧೆಯನ್ನು ಪ್ರೇಕ್ಷಕರು ಆಲಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.