
ದಿಸ್ಪುರ(ಸೆ.28): ಇತ್ತೀಚೆಗಷ್ಟೇ ಅರ್ಜುನ ಪ್ರಶಸ್ತಿಗೆ ಭಾಜನರಾದ ಯುವ ಅಥ್ಲೀಟ್ ಹಿಮಾ ದಾಸ್, ಗುರುವಾರ ಆಸ್ಸಾಂ ರಾಜ್ಯದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಇದನ್ನು ಓದಿ: ಚಿನ್ನ ಗೆದ್ದ ಹಿಮಾ ದಾಸ್’ಗೆ ರೆಡ್ ಕಾರ್ಪೆಟ್ ಸ್ವಾಗತ
ಆಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ್, ಹಿಮಾರನ್ನು ರಾಜ್ಯದ ರಾಯಭಾರಿಯಾಗಿ ನೇಮಕ ಮಾಡಿದರು. ಫಿನ್ಲ್ಯಾಂಡ್ನಲ್ಲಿ ನಡೆದ ಅಂಡರ್-20 ಐಎಎಎಫ್ ವಿಶ್ವ ಅಥ್ಲೆಟಿಕ್ಸ್ ಕೂಟದ 400 ಮೀ. ಓಟದಲ್ಲಿ ಐತಿಹಾಸಿ ಚಿನ್ನ ಗೆದ್ದ ಬಳಿಕ, ಆಸ್ಸಾಂನ ಕ್ರೀಡಾ ರಾಯಭಾರಿಯಾಗಿ ನೇಮಕಗೊಂಡಿದ್ದರು. ಹಿಮಾ ದಾಸ್ ಅರ್ಜುನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಇದನ್ನು ಓದಿ: ಹಿಮಾ ದಾಸ್ ಬೆಳ್ಳಿ ಗೆದ್ದ ಕ್ಷಣ ನೀವೊಮ್ಮೆ ಕಣ್ತುಂಬಿಕೊಳ್ಳಿ
18 ವರ್ಷದ ಹಿಮಾ, 18ನೇ ಏಷ್ಯನ್ ಗೇಮ್ಸ್ನಲ್ಲಿ 2 ಪದಕ ಗೆದ್ದು ಗಮನ ಸೆಳೆದಿದ್ದರು. ಅಲ್ಲದೇ ಇತ್ತೀಚೆಗಷ್ಟೇ ಆ್ಯಡಿಡಾಸ್ ಶೂ ಕಂಪನಿಯ ಅಂಬಾಸಿಡರ್ ಆಗಿಯೂ ನೇಮಕವಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.