
ನವದೆಹಲಿ[ಆ.20]: ಹೇಳದೆ ಕೇಳದೆ ರಾಷ್ಟ್ರೀಯ ಶಿಬಿರದಿಂದ ಹೊರಹೋದ ಒಲಿಂಪಿಕ್ ಕಂಚು ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ 25 ಮಂದಿಯನ್ನು ಭಾರತೀಯ ಕುಸ್ತಿ ಫೆಡರೇಷನ್, ಶಿಬಿರದಿಂದಲೇ ಹೊರಹಾಕಿದೆ. ಈ ಮೂಲಕ ಯಾರೇ ಆಗಲಿ ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಸಂದೇಶವನ್ನು ರವಾನಿಸಿದೆ.
ಕುಸ್ತಿಪಟು ಭಜರಂಗ್ಗೆ ಖೇಲ್ರತ್ನ ಖಚಿತ
ಲಖನೌನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಕೇಂದ್ರದಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಶಿಬಿರದಲ್ಲಿ 45 ಮಹಿಳಾ ಕುಸ್ತಿಪಟುಗಳು ಪಾಲ್ಗೊಂಡಿದ್ದರು. ಈ ಪೈಕಿ 25 ಮಂದಿ, ಫೆಡರೇಷನ್ನ ಅನುಮತಿ ಇಲ್ಲದೆ ಶಿಬಿರಕ್ಕೆ ಗೈರಾಗಿದ್ದಾರೆ. ಸಾಕ್ಷಿ, ಸೀಮಾ ಬಿಸ್ಲಾ ಹಾಗೂ ಕಿರಣ್ ವಿಶ್ವ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದು, ಅವರಿಗೆ ಫೆಡರೇಷನ್ ಶೋ ಕಾಸ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ಗೆ ಬುಧವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ. ಇನ್ನುಳಿದವರನ್ನು ಶಿಬಿರದಿಂದಲೇ ಹೊರಹಾಕಲಾಗಿದೆ. ಸಾಕ್ಷಿ ಸೇರಿ ಮೂವರನ್ನು ವಿಶ್ವ ಚಾಂಪಿಯನ್ಶಿಪ್ ತಂಡದಿಂದಲೂ ಕೈಬಿಡುವ ಸಾಧ್ಯತೆ ಇದೆ.
ಭಾರತೀಯ ಕುಸ್ತಿ ಫೆಡರೇಷನ್ನ ಕಾರ್ಯದರ್ಶಿ ವಿನೋದ್ ತೋಮರ್ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಸಾಕ್ಷಿ ಸೇರಿದಂತೆ ಮೂವರಿಗೆ ನೋಟಿಸ್ ನೀಡಿದ್ದೇವೆ. ಉಳಿದವರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರನ್ನು ಹೊರಹಾಕಲಾಗಿದೆ. ಅಶಿಸ್ತು ತೋರಿದರೆ ಯಾರೇ ಆದರೂ ಸರಿ, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮಾಹಿತಿ ನೀಡದೆ ಶಿಬಿರ ತೊರೆದವರು ಈಗ ತಾಯಿಗೆ ಹುಷಾರಿಲ್ಲ, ಇತ್ಯಾದಿ ಕಾರಣಗಳನ್ನು ನೀಡುತ್ತಿದ್ದಾರೆ. ಆದರೆ ಅದನ್ನೆಲ್ಲಾ ಒಪ್ಪಲು ಸಾಧ್ಯವಿಲ್ಲ. ಅವರನ್ನು ಶಿಬಿರಕ್ಕೆ ಮತ್ತೆ ಸೇರಿಸಿಕೊಳ್ಳಬೇಕೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ’ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.