ದುಬೈ ಮಳೆಗೆ ವಿಮಾನ ವಿಳಂಬ: ದೀಪಕ್‌, ಸುಜೀತ್‌ಗೆ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ಮಿಸ್‌!

Published : Apr 20, 2024, 10:01 AM IST
ದುಬೈ ಮಳೆಗೆ ವಿಮಾನ ವಿಳಂಬ: ದೀಪಕ್‌, ಸುಜೀತ್‌ಗೆ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ಮಿಸ್‌!

ಸಾರಾಂಶ

ಏ.2ರಿಂದ 15ರ ವರೆಗೆ ರಷ್ಯಾದಲ್ಲಿ ತರಬೇತಿ ಪಡೆದಿದ್ದ ದೀಪಕ್‌ ಹಾಗೂ ಸುಜೀತ್‌, ಏ.16ರಂದು ದುಬೈ ಮೂಲಕ ಬಿಷ್ಕೆಕ್‌ ತಲುಪಬೇಕಿತ್ತು. ಆದರೆ ಭಾರಿ ಮಳೆಯಿಂದಾಗಿ ದುಬೈನಲ್ಲಿ ಬಹುತೇಕ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ದುಬೈನಲ್ಲೇ ಬಾಕಿಯಾಗಿದ್ದ ದೀಪಕ್ ಹಾಗೂ ಸುಜೀತ್‌, ಶುಕ್ರವಾರ ಬಿಷ್ಕೆಕ್‌ಗೆ ತೆರಳಿದರೂ, ನಿಗದಿತ ಸಮಯ ಮೀರಿದ್ದರಿಂದ ಆಯೋಜಕರು ಸ್ಪರ್ಧೆಗೆ ಅವಕಾಶ ನಿರಾಕರಿಸಿದ್ದಾರೆ.

ಬಿಷ್ಕೆಕ್‌: ದುಬೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ವಿಳಂಬಗೊಂಡ ಕಾರಣ ತಡವಾಗಿ ಕಿರ್ಗಿಸ್ತಾನದ ಬಿಷ್ಕೆಕ್‌ ತಲುಪಿದ ಭಾರತೀಯ ಕುಸ್ತಿಪಟುಗಳಾದ ದೀಪಕ್‌ ಪೂನಿಯಾ ಹಾಗೂ ಸುಜೀತ್‌ ಕಲಕಲ್‌ಗೆ ಏಷ್ಯನ್‌ ಒಲಿಂಪಿಕ್ಸ್‌ ಅರ್ಹತಾ ಟೂರ್ನಿಯಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸಲಾಗಿದೆ.

ಏ.2ರಿಂದ 15ರ ವರೆಗೆ ರಷ್ಯಾದಲ್ಲಿ ತರಬೇತಿ ಪಡೆದಿದ್ದ ದೀಪಕ್‌ ಹಾಗೂ ಸುಜೀತ್‌, ಏ.16ರಂದು ದುಬೈ ಮೂಲಕ ಬಿಷ್ಕೆಕ್‌ ತಲುಪಬೇಕಿತ್ತು. ಆದರೆ ಭಾರಿ ಮಳೆಯಿಂದಾಗಿ ದುಬೈನಲ್ಲಿ ಬಹುತೇಕ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ದುಬೈನಲ್ಲೇ ಬಾಕಿಯಾಗಿದ್ದ ದೀಪಕ್ ಹಾಗೂ ಸುಜೀತ್‌, ಶುಕ್ರವಾರ ಬಿಷ್ಕೆಕ್‌ಗೆ ತೆರಳಿದರೂ, ನಿಗದಿತ ಸಮಯ ಮೀರಿದ್ದರಿಂದ ಆಯೋಜಕರು ಸ್ಪರ್ಧೆಗೆ ಅವಕಾಶ ನಿರಾಕರಿಸಿದ್ದಾರೆ.

ಸೋಲಿನಿಂದ ಕಂಗೆಟ್ಟರೂ ಬೆಂಗಳೂರಿಗರ ಹೃದಯ ಗೆದ್ದ ಆರ್‌ಸಿಬಿ, ಕೆರೆ ಮರುಜೀವಕ್ಕೆ ನೆರವು!

ಆದರೆ ಇವರಿಬ್ಬರಿಗೂ ಒಲಿಂಪಿಕ್ಸ್‌ ಪ್ರವೇಶಿಸಲು ಮತ್ತೊಂದು ಅವಕಾಶವಿದೆ. ಮುಂದಿನ ತಿಂಗಳು ಟರ್ಕಿಯಲ್ಲಿ ವಿಶ್ವ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ನಡೆಯಲಿದ್ದು, ಅದರಲ್ಲಿ ಸ್ಪರ್ಧಿಸಿ ಗೆಲ್ಲಬೇಕಿದೆ.

ಒಲಿಂಪಿಕ್ಸ್‌ ಅರ್ಹತಾ ಕುಸ್ತಿ: ಸೆಮೀಸಲ್ಲಿ ಸೋತ ಅಮನ್‌

ಬಿಷ್ಕೆಕ್‌(ಕಜಕಸ್ತಾನ): ಇಲ್ಲಿ ನಡೆಯುತ್ತಿರುವ ಏಷ್ಯನ್‌ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ಕುಸ್ತಿಯಲ್ಲಿ ಭಾರತದ ಅಮನ್‌ ಶೆರಾವತ್‌ ಸೆಮಿಫೈನಲ್‌ನಲ್ಲಿ ಅಭಿಯಾನ ಕೊನೆಗೊಳಿಸಿದ್ದಾರೆ. ಇದರೊಂದಿಗೆ ಪುರುಷರ ಫ್ರೀಸ್ಟೈಲ್‌ ವಿಭಾಗದಲ್ಲಿ ಭಾರತ ಯಾವುದೇ ಒಲಿಂಪಿಕ್ಸ್‌ ಕೋಟಾ ಗೆಲ್ಲಲು ವಿಫಲವಾಗಿದೆ.

57 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ಅಮನ್‌, ಸೆಮೀಸ್‌ನಲ್ಲಿ ಉಜ್ಬೇಕಿಸ್ತಾನದ ಗುಲೊಮ್‌ಜೊನ್‌ ಅಬ್ದುಲ್ಲಾ ವಿರುದ್ಧ 0-10 ಅಂತರದಲ್ಲಿ ಪರಾಭವಗೊಂಡರು. ಇದೇ ವೇಳೆ 74 ಕೆ.ಜಿ. ವಿಭಾಗದಲ್ಲಿ ಜೈದೀಪ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಪರಾಭವಗೊಂಡರೆ, 97 ಕೆ.ಜಿ. ವಿಭಾಗದಲ್ಲಿ ಕಣಕ್ಕಿಳಿದಿದ್ದ ದೀಪಕ್‌ ಅವರು ಅರ್ಹತಾ ಸುತ್ತಿನಲ್ಲೇ ಸೋತು ಅಭಿಯಾನ ಕೊನೆಗೊಳಿಸಿದರು. ಸುಮಿತ್‌(125 ಕೆ.ಜಿ.) ಕೂಡಾ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತು ಹೊರಬಿದ್ದರು.

IPL 2024 ಚೆನ್ನೈ ಸೂಪರ್ ಕಿಂಗ್ಸ್ vs ಲಖನೌ ಸೂಪರ್ ಜೈಂಟ್ಸ್: ಸ್ಪಿನ್ ಅಖಾಡದಲ್ಲಿ ಗೆಲ್ಲೋರ್ಯಾರು?

ಕ್ಯಾಂಡಿಡೇಟ್ಸ್‌ ಚೆಸ್‌: ಮತ್ತೆ ಜಂಟಿ ಅಗ್ರಸ್ಥಾನಕ್ಕೆ ಗುಕೇಶ್‌

ಟೊರೊಂಟೊ: ಭಾರತದ ಗ್ರ್ಯಾಂಡ್‌ಮಾಸ್ಟರ್‌ ಡಿ.ಗುಕೇಶ್‌ ಕ್ಯಾಂಡಿಡೇಟ್ಸ್‌ ಚೆಸ್‌ ಟೂರ್ನಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಆದರೆ ಆರ್‌.ಪ್ರಜ್ಞಾನಂದ ಹಾಗೂ ವಿದಿತ್ ಗುಜರಾತಿ ರೇಸ್‌ನಿಂದ ಹೊರಬಿದ್ದಿದ್ದಾರೆ.

ಗುರುವಾರ ಮಧ್ಯರಾತ್ರಿ ಮುಕ್ತ ವಿಭಾಗದ 12ನೇ ಸುತ್ತಿನ ಪಂದ್ಯದಲ್ಲಿ ಗುಕೇಶ್‌ ಅವರು ಅಜರ್‌ಬೈಜಾನ್‌ನ ನಿಜಾತ್‌ ಅಬಸೊವ್‌ ವಿರುದ್ಧ ಗೆಲುವು ಸಾಧಿಸಿದರು. ಇದರೊಂದಿಗೆ ಅಂಕವನ್ನು 7.5ಕ್ಕೆ ಹೆಚ್ಚಿಸಿದ ಗುಕೇಶ್‌, ಅಮೆರಿಕದ ಹಿಕರು ನಕಮುರಾ, ರಷ್ಯಾದ ಇಯಾನ್‌ ನೆಪೊಮ್ನಿಯಾಚಿ ಜೊತೆ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಟೂರ್ನಿಯಲ್ಲಿ ಇನ್ನೆರಡು ಸುತ್ತಿನ ಪಂದ್ಯಗಳು ಬಾಕಿಯಿದ್ದು, ಅಗ್ರಸ್ಥಾನಕ್ಕಾಗಿ ಪೈಪೋಟಿ ಹೆಚ್ಚಿದೆ. ಇದೇ ವೇಳೆ ನೆಪೊಮ್ನಿಯಾಚಿ ವಿರುದ್ಧ ಡ್ರಾ ಸಾಧಿಸಿದ ಆರ್‌.ಪ್ರಜ್ಞಾನಂದ 6 ಅಂಕದೊಂದಿಗೆ 5ನೇ ಸ್ಥಾನದಲ್ಲಿದ್ದರೆ, ವಿದಿತ್‌ ಕೇವಲ 5 ಅಂಕ ಹೊಂದಿದ್ದಾರೆ.

ಇನ್ನು, ಮಹಿಳಾ ವಿಭಾಗದ 12ನೇ ಸುತ್ತಿನಲ್ಲಿ ಕೊನೆರು ಹಂಪಿ ಅವರು ರಷ್ಯಾದ ಅಲೆಕ್ಸಾಂಡ್ರಾ ವಿರುದ್ಧ ಡ್ರಾ ಸಾಧಿಸಿದರೆ, ಆರ್‌.ವೈಶಾಲಿ ಉಕ್ರೇನ್‌ನ ಅನ್ನಾ ವಿರುದ್ಧ ಗೆಲುವು ಸಾಧಿಸಿದರು. ಕೊನೆರು 6 ಅಂಕದೊಂದಿಗೆ ಜಂಟಿ 3ನೇ, ವೈಶಾಲಿ 5.5 ಅಂಕದೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐರ್ಲೆಂಡ್‌ನಲ್ಲಿ ಜೋರಾಯ್ತು ವೈಭವ್ ಸೂರ್ಯವಂಶಿ ಕ್ರೇಜ್! ಭಾರತ-ಐರ್ಲೆಂಡ್ ಪಂದ್ಯದ ಟಿಕೆಟ್‌ಗಳು ನಿಮಿಷಗಳಲ್ಲೇ ಸೋಲ್ಡ್ ಔಟ್
ಬಾಂಗ್ಲಾದೇಶ ಎದುರು ಗೆಲ್ಲುತ್ತಿದ್ದಂತೆಯೇ ಭಾರತದ ಸೆಮೀಸ್ ಹಾದಿ ಮತ್ತಷ್ಟು ಸುಗಮ! ಟಿ20 ವಿಶ್ವಕಪ್ ಸೆಮೀಸ್ ಲೆಕ್ಕಾಚಾರ ಇಲ್ಲಿದೆ