
ಬೆಂಗಳೂರು(ಸೆ.21): ಉದ್ಯಾನ ನಗರಿ ಬೆಂಗಳೂರಿನಲ್ಲಿ ತಂಗಿರುವ ಟೀಂ ಇಂಡಿಯಾ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದೆ. ಸೌತ್ ಆಫ್ರಿಕಾ ವಿರುದ್ದದ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕಾಗಿ ಅಂತಿಮ ಕಸರತ್ತು ನಡೆಸುತ್ತಿದೆ. ಈ ವೇಳೆ ನಾಯಕ ವಿರಾಟ್ ಕೊಹ್ಲಿ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA) ನೂತನ ಚೇರ್ಮೆನ್ ರಾಹುಲ್ ದ್ರಾವಿಡ್ ಭೇಟಿಯಾಗಿದ್ದಾರೆ. ಈ ಫೋಟೋ ಮೂಲಕ ಅಭಿಮಾನಿಗಳು ಬಿಸಿಸಿಐಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ದಿಗ್ಗಜ ದ್ರಾವಿಡ್ ಜೊತೆ ರವಿ ಶಾಸ್ತ್ರಿ ಹೋಲಿಸಬೇಡಿ; BCCIಗೆ ಅಭಿಮಾನಿಗಳ ಕ್ಲಾಸ್!
ಅಭ್ಯಾಸದ ವೇಳೆ ರಾಹುಲ್ ದ್ರಾವಿಡ್ ಹಾಗೂ ವಿರಾಟ್ ಕೊಹ್ಲಿ ಭೇಟಿಯಾಗಿದ್ದಾರೆ. ಈ ಫೋಟವನ್ನು ಸ್ವತಃ ವಿರಾಟ್ ಕೊಹ್ಲಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ತಕ್ಷಣವೇ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ದಿಗ್ಗಜರ ಸಮಾಗಮ, ಇಬ್ಬರು ದಿಗ್ಗಜರು ಭೇಟಿಯಾದಾಗ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಬಿಸಿಸಿಐ ಇತ್ತೀಚೆಗೆ ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ಫೋಟೋ ಟ್ವೀಟ್ ಮಾಡಿ ಇಬ್ಬರು ದಿಗ್ಗಜರು ಎಂದಿತ್ತು. ಇದಕ್ಕೆ ತೀವ್ರ ವಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ಬಿಸಿಸಿಐ ದಿಗ್ಗಜರಿಗೆ ಅಭಿಮಾನಿಗಳು ಕೊಹ್ಲಿ ಹಾಗೂ ದ್ರಾವಿಡ್ ನಿಜವಾದ ದಿಗ್ಗಜರು ಎಂದು ಹೇಳೋ ಮೂಲಕ ಟಾಂಗ್ ನೀಡಿದ್ದಾರೆ.
ಇದನ್ನೂ ಓದಿ: ಬೆಂಗ್ಳೂರಲ್ಲಿ ಕೊಹ್ಲಿ ಪಡೆ ಬಿರುಸಿನ ಅಭ್ಯಾಸ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.