ಅಂತರಾಷ್ಟ್ರೀಯ ಅಥ್ಲೀಟ್, ಕನ್ನಡಿಗ ಅರ್ಜುನ್ ದೇವಯ್ಯ ಕಾರು ಅಪಘಾತ

Published : Nov 27, 2018, 04:10 PM IST
ಅಂತರಾಷ್ಟ್ರೀಯ ಅಥ್ಲೀಟ್, ಕನ್ನಡಿಗ ಅರ್ಜುನ್ ದೇವಯ್ಯ ಕಾರು ಅಪಘಾತ

ಸಾರಾಂಶ

ಇಂದು ಮುಂಜಾನೆ ಈ ಅವಘಡ ಸಂಭವಿಸಿದ್ದು, ಮೈಸೂರು ಜಿಲ್ಲೆಯ ಬಿಳಿಕೆರೆ ಬಳಿ ಕಾರು ಅಪಘಾತವಾಗಿದೆ. ಬೆಳಗಿನಜಾವ ತುಂಬಾ ಮಂಜು ಕವಿದಿದ್ದರಿಂದ ತಿರುವಿನಲ್ಲಿ ರಸ್ತೆ ಕಾಣದೇ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಹೊಡೆದಿದೆ.

ಬೆಂಗಳೂರು[ನ.27]: ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಅಥ್ಲೀಟ್ ಅರ್ಜುನ್ ದೇವಯ್ಯ ಅವರ ಕಾರು ಅಪಘಾತವಾಗಿದ್ದು, ಅರ್ಜುನ್ ತಲೆಗೆ, ಪತ್ನಿ ದಿವ್ಯಾ ಕೈಗೆ ತೀವ್ರವಾಗಿ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಫತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ ಈ ಅವಘಡ ಸಂಭವಿಸಿದ್ದು, ಮೈಸೂರು ಜಿಲ್ಲೆಯ ಬಿಳಿಕೆರೆ ಬಳಿ ಕಾರು ಅಪಘಾತವಾಗಿದೆ. ಬೆಳಗಿನಜಾವ ತುಂಬಾ ಮಂಜು ಕವಿದಿದ್ದರಿಂದ ತಿರುವಿನಲ್ಲಿ ರಸ್ತೆ ಕಾಣದೇ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಹೊಡೆದಿದೆ. ಕಾರಿನಲ್ಲಿ ಅರ್ಜುನ್ ದೇವಯ್ಯ, ಪತ್ನಿ ದಿವ್ಯಾ, ಪುತ್ರ ಅಭಿಮನ್ಯು ಸೇರಿ ಒಟ್ಟು ಐವರು ಇದ್ದರು. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅರ್ಜುನ್ ಹಾಗೂ ದಿವ್ಯಾ ಅವರಿಗೆ ಗಂಭೀರ ಆಗಿದ್ದು, ಈ ಸಂಬಂಧ ಬಿಳಿಕರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!