
ಕೋಲ್ಕತಾ[ಏ.21]: ಆರ್ಸಿಬಿ ವಿರುದ್ಧ ಶುಕ್ರವಾರ ವೀರೋಚಿತ ಸೋಲು ಅನುಭವಿಸಿದ ಬಳಿಕ ಕೆಕೆಆರ್ನ ಪ್ರಚಂಡ ಬ್ಯಾಟ್ಸ್ಮನ್ ಆ್ಯಂಡ್ರೆ ರಸೆಲ್ ತಂಡದ ಬ್ಯಾಟಿಂಗ್ ಕ್ರಮಾಂಕವನ್ನು ಪ್ರಶ್ನಿಸುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಕೊನೆಯವರೆಗೂ KKR ಹೋರಾಟ- ಗೆಲುವಿನ ನಿಟ್ಟುಸಿರುಬಿಟ್ಟ RCB!
214 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ಕೆಕೆಆರ್ ಮೊದಲ 5 ಓವರ್ ಒಳಗೇ 33 ರನ್ಗೆ 3 ವಿಕೆಟ್ ಕಳೆದುಕೊಂಡಿತು. ರಾಬಿನ್ ಉತ್ತಪ್ಪ 20 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದರು. ರಸೆಲ್ ಕ್ರೀಸ್ಗಿಳಿದಾಗ ತಂಡದ ಗೆಲುವಿಗೆ 49 ಎಸೆತಗಳಲ್ಲಿ 135 ರನ್ಗಳ ಅವಶ್ಯಕತೆ ಇತ್ತು. ರಾಣಾ ಜತೆ ಸೇರಿ ಹೋರಾಡಿದ ರಸೆಲ್, ಕೊನೆ ಓವರ್ನಲ್ಲೂ ಕೆಕೆಆರ್ ಗೆಲುವಿನ ಆಸೆ ಇರಿಸಿಕೊಳ್ಳುವಂತೆ ಮಾಡಿದರು.
ಐಪಿಎಲ್ ಬ್ರೇಕ್ ಬಗ್ಗೆ ತುಟಿಬಿಚ್ಚಿದ ಎಬಿಡಿ..
ಪಂದ್ಯದ ಬಳಿಕ ಮಾತನಾಡಿದ ರಸೆಲ್, ‘ನಾವು 10 ರನ್ಗಳಿಂದ ಸೋತೆವು. ಎರಡೇ ಎರಡು ಸಿಕ್ಸರ್ ಬೇಕಿತ್ತು. ಮಧ್ಯ ಓವರ್ಗಳಲ್ಲಿ ವೇಗವಾಗಿ ಬ್ಯಾಟ್ ಮಾಡಿದರೆ ಮಾತ್ರ ದೊಡ್ಡ ಮೊತ್ತ ಬೆನ್ನತ್ತಲು ಸಾಧ್ಯ. ತಂಡ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ನಾನು 4ನೇ ಕ್ರಮಾಂಕದಲ್ಲಿ ಆಡಲು ಹಿಂಜರಿಯುವುದಿಲ್ಲ’ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.