
ಮುಂಬೈ(ಮಾ.28): ಡೇವಿಡ್ ವಾರ್ನರ್ ಚಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್'ನಿಂದ ಒಂದು ವರ್ಷ ನಿಷೇಧಕ್ಕೆ ಒಳಗಾದ ನಂತರ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಥವಾ ಮನೀಶ್ ಪಾಂಡೆ ಇವರಲ್ಲಿ ಒಬ್ಬರು ನೇಮಕವಾಗುವ ಸಾಧ್ಯತೆಯಿದೆ.
ವಾರ್ನರ್ ಅವರನ್ನು 2014ರಲ್ಲಿ ಐಪಿಎಲ್ ಹರಾಜಿನಲ್ಲಿ 5.5 ಕೋಟಿ ರೂ. ಮೊತ್ತಕ್ಕೆ ಹೈದರಾಬಾದ್ ತಂಡ ಖರೀದಿಸಿತ್ತು. 2014ರಲ್ಲಿ ಶಿಖರ್ ಧವನ್ ತಂಡದ ನಾಯಕರಾಗಿದ್ದರು. 2016ರಲ್ಲಿ ವಾರ್ನರ್ ಅವರನ್ನು ಸಾರಥಿಯನ್ನಾಗಿ ನೇಮಿಸಲಾಗಿತ್ತು. 2016ರಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್'ಸಿಬಿಯನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಮನೀಶ್ ಪಾಂಡೆ ಅವರು ಹರಾಜಿನಲ್ಲಿ 11 ಕೋಟಿಗೆ ಹರಾಜಾಗಿದ್ದರು.
ಸ್ಟಿವ್ ಸ್ಮಿತ್ ಅವರನ್ನು 2 ದಿನಗಳ ಹಿಂದಷ್ಟೆ ರಾಜಸ್ಥಾನ್ ತಂಡದ ನಾಯಕ ಸ್ಥಾನದಿಂದ ಕೈಬಿಟ್ಟು ಅಜಿಂಕ್ಯ ರಹಾನೆ ಅವರನ್ನು ನೇಮಿಸಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.