ಟೀಕಾಕಾರರ ಬಾಯಿ ಮುಚ್ಚಿಸಿದ ವಿನಯ್ ಕುಮಾರ್ ಈ ಟ್ವೀಟ್..!

Published : Apr 11, 2018, 08:56 PM ISTUpdated : Apr 14, 2018, 01:13 PM IST
ಟೀಕಾಕಾರರ ಬಾಯಿ ಮುಚ್ಚಿಸಿದ ವಿನಯ್ ಕುಮಾರ್ ಈ ಟ್ವೀಟ್..!

ಸಾರಾಂಶ

ಪಂದ್ಯ ಮುಕ್ತಾಯವಾಗುತ್ತಿದ್ದಂತೆ ಕೆಕೆಆರ್ ಅಭಿಮಾನಿಗಳು ವಿನಯ್ ಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದಾದ ಬಳಿಕ ಟೀಕಾಕಾರರಿಗೆ ವಿನಯ್ ಕುಮಾರ್ ಟ್ವೀಟ್'ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

ಕೋಲ್ಕತ ನೈಟ್'ರೈಡರ್ಸ್ ವೇಗದ ಬೌಲರ್ ವಿನಯ್ ಕುಮಾರ್ ನಿನ್ನೆ ನಡೆದ ಸಿಎಸ್'ಕೆ ವಿರುದ್ಧದ ಪಂದ್ಯ ಮುಕ್ತಾಯದ ಬಳಿಕ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಅಂತಿಮ ಓವರ್'ನಲ್ಲಿ 17 ರನ್'ಗಳನ್ನು ರಕ್ಷಿಸಿಕೊಳ್ಳಲು ವಿಫಲವಾದ ವಿನಯ್ ಕುಮಾರ್ ಮೇಲೆ ಕೆಕೆಆರ್ ಕ್ರಿಕೆಟ್ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಚೆನ್ನೈ ಸೂಪರ್'ಕಿಂಗ್ಸ್ ತಂಡವು ಕೊನೆಯ ಓವರ್'ನಲ್ಲಿ ಗೆಲ್ಲಲು 17 ರನ್'ಗಳ ಅವಶ್ಯಕತೆಯಿತ್ತು. ಕೊನೆಯ ಓವರ್'ನ ಬೌಲಿಂಗ್ ಮಾಡಿದ ವಿನಯ್ ಮೊದಲ ಎಸೆತದಲ್ಲೇ ನೋಬಾಲ್ ಹಾಕಿ ಸಿಕ್ಸರ್ ಬಿಟ್ಟುಕೊಟ್ಟರು. ಕೊನೆಯ ಎರಡು ಎಸೆತದಲ್ಲಿ ಸಿಎಸ್'ಕೆಗೆ ಗೆಲ್ಲಲು 4 ರನ್'ಗಳ ಅವಶ್ಯಕತೆಯಿತ್ತು. ಆಗ ರವೀಂದ್ರ ಜಡೇಜಾ ಸಿಕ್ಸರ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.

ಪಂದ್ಯ ಮುಕ್ತಾಯವಾಗುತ್ತಿದ್ದಂತೆ ಕೆಕೆಆರ್ ಅಭಿಮಾನಿಗಳು ವಿನಯ್ ಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದಾದ ಬಳಿಕ ಟೀಕಾಕಾರರಿಗೆ ವಿನಯ್ ಕುಮಾರ್ ಟ್ವೀಟ್'ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

ಇದೊಂದು ಪಂದ್ಯವಷ್ಟೇ ಹಾಗಾಗಿ ಇರ್ಲಿ ಬಿಡಿ. ನಾನು ಆರ್'ಸಿಬಿ ವಿರುದ್ಧ 9 ರನ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ 10 ರನ್'ಗಳನ್ನು ಡಿಫೆಂಡ್ ಮಾಡಿಕೊಂಡಾಗ ನೀವೆಲ್ಲಿ ಹೋಗಿದ್ರಿ. ಕೆಲವೊಮ್ಮೆ ತಪ್ಪುಗಳಾಗುತ್ತವೆ ಎಂದು ಟ್ವೀಟ್ ಮಾಡುವ ಮೂಲಕ ಟೀಕಾಕಾರರಿಗೆ ಸರಿಯಾಗಿಯೇ ಉತ್ತರಕೊಟ್ಟಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Ind vs SA 3rd T20I: ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?
ಲಿಯೋನೆಲ್ ಮೆಸ್ಸಿ ನೋಡಲಾಗದೇ ರೊಚ್ಚಿಗೆದ್ದ ಕೋಲ್ಕತಾ! ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಪೊಲೀಸರಿಂದ ಲಾಠಿಚಾರ್ಜ್