IPL 2019: ಚೆನ್ನೈನಿಂದ ಫೈನಲ್ ಪಂದ್ಯ ಸ್ಥಳಾಂತರ, ಬೆಂಗ್ಳೂರಿಗೆ ಶಿಫ್ಟ್ ?

Published : Apr 09, 2019, 01:35 PM IST
IPL 2019: ಚೆನ್ನೈನಿಂದ ಫೈನಲ್ ಪಂದ್ಯ ಸ್ಥಳಾಂತರ, ಬೆಂಗ್ಳೂರಿಗೆ ಶಿಫ್ಟ್ ?

ಸಾರಾಂಶ

ಚೆನ್ನೈ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿ ವಿವಾದ ಹೈದ್ರಾಬಾದ್, ಬೆಂಗ್ಳೂರು ಅಂಗಣ ಕಾಯ್ದಿಟ್ಟ ಬಿಸಿಸಿಐ

ನವದೆಹಲಿ: ಐಪಿಎಲ್ 12ನೇ ಆವೃತ್ತಿಯ ಪ್ಲೇ-ಆಫ್ ಹಾಗೂ ಫೈನಲ್ ಪಂದ್ಯದ ಆತಿಥ್ಯ ಚೆನ್ನೈ ಕೈ ತಪ್ಪುವ ಸಾಧ್ಯತೆಯಿದೆ. ಒಂದೊಮ್ಮೆ ಇಲ್ಲಿನ ಚೆಪಾಕ್ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿ ವಿವಾದ ಬಗೆ ಹರಿಯದಿದ್ದರೆ ಅಂತಿಮ ಸುತ್ತಿನ ಐಪಿಎಲ್ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಬಿಸಿಸಿಐ ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣವನ್ನುಕಾಯ್ದಿಟ್ಟ ಸ್ಥಳವನ್ನಾಗಿ ಸೋಮವಾರ ಬಿಸಿಸಿಐ ಆಯ್ಕೆ ಮಾಡಿದೆ.

ತಮಿಳುನಾಡು ಕ್ರಿಕೆಟ್ ಸಂಸ್ಥೆಯು (ಟಿಎನ್‌ಸಿಎ) ಚೆಪಾಕ್ ಕ್ರೀಡಾಂಗಣದ ಐ, ಜೆ ಹಾಗೂ ಕೆ ಪ್ರೇಕ್ಷಕರ ಗ್ಯಾಲರಿಗೆ 2012ರಿಂದ ಸ್ಥಳೀಯ ಮುನಿಸಿಪಲ್ ಕಾರ್ಪೋರೇಷನ್‌ನಿಂದ ಯೋಗ್ಯತಾ ಪ್ರಮಾಣ ಪತ್ರ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಈ 3 ಗ್ಯಾಲರಿಗಳಿಗೆ ಸದ್ಯಕ್ಕೆ ಪ್ರೇಕ್ಷಕರಿಗೆ ಪ್ರವೇಶ ತಡೆಹಿಡಿಯಲಾಗಿದೆ

ವಿಶೇಷವೆಂದರೆ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ಇದೇ ಚೆಪಾಕ್ ಅಂಗಳದಲ್ಲಿ ನಡೆದಿತ್ತು. ಆ ವೇಳೆ ಯಾವುದೇ ಚಕಾರ ಎತ್ತದ ಬಿಸಿಸಿಐ, ಇದೀಗ ಏಕೆ ಈ ತಕರಾರು ತೆಗೆದಿದೆ ಎಂಬ ಪ್ರಶ್ನೆ ಕಾಡುತ್ತಿದೆ

‘ಒಂದೊಮ್ಮೆ ಚೆಪಾಕ್ ಅಂಗಳದ ಪ್ರೇಕ್ಷಕರ ಗ್ಯಾಲರಿ ವಿವಾದ ಬಗೆ ಹರಿಯದಿದ್ದರೆ 2 ಪ್ಲೇ-ಆಫ್ ಪಂದ್ಯಗಳು, ಎಲಿಮಿನೇಟರ್ ಹಾಗೂ ಫೈನಲ್ ಪಂದ್ಯವನ್ನು ಮತ್ತೊಂದು ಕ್ರೀಡಾಂಗಣಕ್ಕೆ ಸ್ಥಳಾಂತರಿಸಲು ಚಿಂತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಹೈದರಾಬಾದ್ ಕ್ರೀಡಾಂಗಣಗಳನ್ನು ಮುಂಚಿತವಾಗಿಯೇ ಕಾಯ್ದಿಟ್ಟ ಸ್ಥಳವನ್ನಾಗಿ ಗುರುತಿಸಲಾಗಿದೆ’ ಎಂದು ಹೆಸರು ಹೇಳಲಿಚ್ಚಿಸದ ಬಿಸಿಸಿಐ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!