IPL 2019: ಟಾಸ್ ಗೆದ್ದ CSK ಬ್ಯಾಟಿಂಗ್ ಆಯ್ಕೆ- ತಂಡದಲ್ಲಿ ಮಹತ್ತರ ಬದಲಾವಣೆ!

Published : Apr 17, 2019, 07:44 PM ISTUpdated : Apr 17, 2019, 07:48 PM IST
IPL 2019: ಟಾಸ್ ಗೆದ್ದ  CSK ಬ್ಯಾಟಿಂಗ್ ಆಯ್ಕೆ- ತಂಡದಲ್ಲಿ ಮಹತ್ತರ ಬದಲಾವಣೆ!

ಸಾರಾಂಶ

ಸನ್ ರೈಸರ್ಸ್ ಹೈದರಾಬಾದ್ ವಿರುದ್ದದ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. CSK ತಂಡದಲ್ಲಿ ನಾಯಕ ಧೋನಿಗೆ ರೆಸ್ಟ್ ನೀಡಲಾಗಿದ್ದು, ಮಹತ್ತರ ಬದಲಾವಣೆ ಮಾಡಲಾಗಿದೆ.

ಹೈದರಾಬಾದ್(ಏ.17): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ಗೆ ಎಂಟ್ರಿ ಕೊಡಲು ಸಜ್ಜಾಗಿರುವ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಹೋರಾಟ ನಡೆಸಲಿದೆ. ಈಗಾಗಲೇ ಟಾಸ್ ಗೆದ್ದಿರುವ CSK ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ನಾಯಕ ಎಂ.ಎಸ್. ಧೋನಿಗೆ ರೆಸ್ಟ್ ನೀಡಲಾಗಿದೆ. ಹೀಗಾಗಿ ಸುರೇಶ್ ರೈನಾ ತಂಡವನ್ನು ಮುನ್ನಡೆಸಲಿದ್ದಾರೆ.

 

 

CSK ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಎಂ.ಎಸ್.ಧೋನಿ ಬದಲು ಸ್ಯಾಮ್ ಬಿಲ್ಲಿಂಗ್ಸ್ ತಂಡ ಸೇರಿಕೊಂಡಿದ್ದರೆ, ಮಿಚಲ್ ಸ್ಯಾಂಟ್ನರ್ ಬದಲು ಕರಣ್ ಶರ್ಮಾ ತಂಡಕ್ಕೆ ಆಗಮಿಸಿದ್ದಾರೆ. ಇತ್ತ ಹೈದರಾಬಾದ್ ತಂಡದಲ್ಲೂ 2 ಬದಲಾವಣೆ ಮಾಡಲಾಗಿದೆ. ರಿಕಿ ಬುಕಿ ಹಾಗೂ ಅಭಿಷೇಕ್ ಶರ್ಮಾ ತಂಡದಿಂದ ಹೊರಗುಳಿದಿದ್ದಾರೆ. ಇವರ ಬದಲು ಯುಸೂಫ್ ಪಠಾಣ್ ಹಾಗೂ ಶಹಭಾಸ್ ನದೀಮ್ ತಂಡ ಸೇರಿಕೊಂಡಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!