
ಬೆಂಗಳೂರು(ಏ.05): 12ನೇ ಆವೃತ್ತಿ ಐಪಿಎಲ್ ಟೂರ್ನಿ ಇದುವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಸಿಹಿಯನ್ನೇ ತಂದುಕೊಟ್ಟಿಲ್ಲ. ಆಡಿದ 4 ಪಂದ್ಯಗಳಲ್ಲಿ ಸೋತು ತೀವ್ರ ಮುಖಭಂಗಕ್ಕೊಳಗಾಗಿದೆ. ಇದೀಗ ತವರಿನಲ್ಲಿ 5ನೇ ಪಂದ್ಯ ಆಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಕಣಕ್ಕಿಳಿದಿರುವ RCB ಟಾಸ್ ಸೋತಿದೆ. ಪ್ರಮುಖ ಪಂದ್ಯದಲ್ಲಿ ಟಾಸ್ ಗೆದ್ದಿರುವ KKR ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. RCB ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಶಿಮ್ರೊನ್ ಹೆಟ್ಮೆಯರ್ ಬದಲು ಟಿಮ್ ಸೌಥಿ ಕಣಕ್ಕಿಳಿಯುತ್ತಿದ್ದರೆ, ಉಮೇಶ್ ಯಾದವ್ ಬದಲು ಪವನ್ ನೇಗಿಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ; ಎಬಿಡಿಗೆ ಕೆಕೆಆರ್ ಕಂಡ್ರೆ ಭಯ..!
ಕೆಕೆಆರ್ ಆಡಿದ 3 ಪಂದ್ಯದಲ್ಲಿ 2 ಗೆಲುವು ಹಾಗೂ 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಮೊದಲ ಪಂದದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ದ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸೋಲಿಸಿತ್ತು. 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಸೋಲು ಅನುಭವಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.