
ಬೆಂಗಳೂರು(ಏ.24): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಟಾಸ್ ಗೆದ್ದಿರುವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಸ್ಯಾಮ್ ಕುರ್ರನ್ ಬದಲು ನಿಕೋಲಸ್ ಪೂರನ್ ತಂಡ ಸೇರಿಕೊಂಡಿದ್ದರೆ, ಹರ್ಪ್ರೀತ್ ಬ್ರಾರ್ ಬದಲು ಅಂಕಿತ್ ರಜಪೂತ್ ತಂಡ ಸೇರಿಕೊಂಡಿದ್ದಾರೆ.
ಸತತ 2 ಗೆಲುವು ಸಾಧಿಸಿರುವ RCB ಇದೀಗ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ವೇಗಿ ಡೇಲ್ ಸ್ಟೇನ್ ಆಗಮನದ ಬಳಿಕ ಬೆಂಗಳೂರು ತಂಡದ ಲಕ್ ಬದಲಾಗಿದೆ. ಇದೀಗ ತವರಿನಲ್ಲಿ ಕಣಕ್ಕಿಳಿಯುತ್ತಿರುವ RCB ಅಭಿಮಾನಿಗಳಿಗೆ ಭರ್ಜರಿ ಗೆಲುವಿನ ಗಿಫ್ಟ್ ನೀಡಲು ರೆಡಿಯಾಗಿದೆ.
ರಾಯಲ್ ಚಾಲೆಂಜರ್ಸ್ ಆಡಿದ 10 ಪಂದ್ಯದಲ್ಲಿ 3 ಗೆಲುವು ಸಾಧಿಸಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇತ್ತ ಪಂಜಾಬ್ 10ರಲ್ಲಿ 5 ಪಂದ್ಯ ಗೆದ್ದು, 5ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋಲು ಕಂಡಿರುವ ಪಂಜಾಬ್ ಇದೀಗ ಕಮ್ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.