
ಬೆಂಗಳೂರು(ಆ.24): ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಹಾಗೂ ಅತ್ಯಂತ ಜನಪ್ರಿಯ ತಂಡ. ಆದರೆ ಕಳೆದ 11 ವರ್ಷಗಳಿಂದ ಪ್ರಶಸ್ತಿಗಾಗಿ ಹೋರಾಡುತ್ತಲೇ ಇದೆ. ಕಳೆದ ಐಪಿಎಲ್ ಟೂರ್ನಿಲ್ಲಿ ಲೀಗ್ ಹಂತದಿಂದಲೇ ಹೊರಬಿದ್ದು ನಿರಾಸೆ ಅನುಭವಿಸಿತ್ತು.
2019ರ ಐಪಿಲ್ ಟೂರ್ನಿಗೆ ಈಗಲೇ ತಯಾರಿ ಆರಂಭಿಸಿರುವ ಆರ್ಸಿಬಿ ತಂಡದಲ್ಲಿ ಮೇಜರ್ ಸರ್ಜರಿ ಮಾಡಿದೆ. ತಂಡದ ಹೆಡ್ ಕೋಚ್ ಡೆನಿಯಲ್ ವೆಟ್ಟೋರಿ ಸೇರಿದಂತೆ ಸಪೋರ್ಟ್ ಸ್ಟಾಫ್ಗಳನ್ನ ವಜಾ ಮಾಡಿದೆ.
ಕಳೆದ ಆವೃತ್ತಿಯ ಕಳಪೆ ಪ್ರದರ್ಶನದಿಂದ ಆರ್ಸಿಬಿ ಫ್ರಾಂಚೈಸಿ ಈ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಆದರೆ ಕಳೆದ ಬಾರಿ ಆರ್ಸಿಬಿ ತಂಡದ ಬೌಲಿಂಗ್ ಕೋಚ್ ಜವಾಬ್ದಾರಿ ನಿರ್ವಹಿಸಿದ ಆಶಿಶ್ ನೆಹ್ರಾ ಮುಂದಿನ ಐಪಿಎಲ್ನಲ್ಲೂ ಮುಂದುವರಿಯಲಿದ್ದಾರೆ.
ಹೆಡ್ ಕೋಚ್ ವೆಟ್ಟೋರಿ ಸ್ಥಾನಕ್ಕೆ ಟೀಂ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕಸರ್ನ್ ಆಯ್ಕೆ ಮಾಡೋ ಸಾಧ್ಯತೆ ಹೆಚ್ಚಿದೆ. ಈ ಮೂಲಕ 12ನೇ ಆವೃತ್ತಿಯಲ್ಲಿ ಪ್ರಶಸ್ತಿ ಗೆಲ್ಲಲು ಬಲಿಷ್ಠ ತಂಡ ರೂಪಿಸಲು ಆರ್ಸಿಬಿ ಸಜ್ಜಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.