
ಬೆಂಗಳೂರು(ಏ.21): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಪಾರ್ಥೀವ್ ಪಟೇಲ್ ಮನರಂಜನೆ ನೀಡಿದರು. ಪಾರ್ಥೀವ್ ಪಟೇಲ್ ಹೋರಾಟ, ಎಬಿ ಡಿವಿಲಿಯರ್ಸ್ ಹಾಗೂ ಅಕ್ಷದೀಪ್ ನಾಥ್ ಹಾಗೂ ಮೊಯಿನ್ ಆಲಿ ಅವರ ಉಪಯುಕ್ತ ಕಾಣಿಕೆಯಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 161 ರನ್ ಸಿಡಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ RCB ಆರಂಭದಲ್ಲೇ ಕೊಹ್ಲಿ ವಿಕೆಟ್ ಕಳೆದುಕೊಂಡಿದು. ಕೊಹ್ಲಿ ಕೇವಲ 9 ರನ್ ಸಿಡಿಸಿ ಔಟಾದರು. ಎಬಿ ಡಿವಿಲಿಯರ್ಸ್ 25 ರನ್ ಕಾಣಿಕೆ ನೀಡಿದರೆ, ಅಕ್ಷದೀಪ್ ನಾಥ್ 24 ರನ್ ಸಿಡಿಸಿ ಔಟಾದರು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಪಾರ್ಥೀವ್ ಪಟೇಲ್ ಹೋರಾಟ ನೀಡಿದರು.
ಪಾರ್ಥೀವ್ ಪಟೇಲ್ ಹಾಫ್ ಸೆಂಚುರಿ ಸಿಡಿಸಿ ತಂಡಕ್ಕೆ ಆಸರೆಯಾದರು. ಅರ್ಧಶತಕದ ಬಳಿಕ ಪಾರ್ಥೀವ್ ವಿಕೆಟ್ ಕೈಚೆಲ್ಲಿದರು. ಪಾರ್ಥೀವ್ 53 ರನ್ ಸಿಡಿಸಿ ಔಟಾದರು. ಮಾರ್ಕಸ್ ಸ್ಟೊಯ್ನಿಸ್ 14 ರನ್ಗೆ ಸುಸ್ತಾದರು. ಪವನ್ ನೇಗಿ ಮತ್ತೆ ನಿರಾಸೆ ಅನುಭವಿಸಿದರು. ಮೊಯಿನ್ ಆಲಿ 26 ರನ್ ಸಿಡಿಸಿದರು. ಈ ಮೂಲಕ RCB 7 ವಿಕೆಟ್ ನಷ್ಟಕ್ಕೆ 161 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.