
ದೆಹಲಿ(ಮಾ.30): ಬಿಗ್ ಹಿಟ್ಟರ್ ಆ್ಯಂಡ್ರೆ ರಸೆಲ್ ಸ್ಫೋಟಕ ಇನ್ನಿಂಗ್ಸ್ ಹಾಗೂ ನಾಯಕ ದಿನೇಶ್ ಕಾರ್ತಿಕ್ ಹಾಫ್ ಸೆಂಚುರಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸಂಕಷ್ಟದಿಂದ ದೂರ ಮಾಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 185 ರನ್ ಸಿಡಿಸಿದೆ. ಇದೀಗ ತವರಿನ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವಿಗೆ 186 ರನ್ ಗಳಿಸಬೇಕಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಕೆಕೆಆರ್ಗೆ ಟಾಪ್ ಆರ್ಡರ್ ಬ್ಯಾಟ್ಸ್ಮನ್ಗಳು ಕೈಕೊಟ್ಟರು. ನಿಖಿಲ್ ನಾಯಕ್, ಕ್ರಿಸ್ ಲಿನ್ ಅಬ್ಬರಿಸಲಿಲ್ಲ. ರಾಬಿನ್ ಉತ್ತಪ್ಪ ಹಾಗೂ ನಿತೀಶ್ ರಾಣ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಶುಭ್ಮಾನ್ ಗಿಲ್ ಬಂದ ಹಾಗೇ ಪೆವಿಲಿಯನ್ ಸೇರಿದರು. 61 ರನ್ ಗಳಿಸುವಷ್ಟರಲ್ಲೇ ಕೆಕೆಆರ್ 5 ವಿಕೆಟ್ ಕಳೆದುಕೊಂಡಿತು.
ಆ್ಯಂಡ್ರೆ ರಸೆಲ್ ಕ್ರೀಸ್ಗೆ ಬಂದ ಮೇಲೆ ಕೆಕೆಆರ್ ಚಿತ್ರಣವೇ ಬದಲಾಯ್ತು. ನಾಯಕ ದಿನೇಶ್ ಕಾರ್ತಿಕ್ ಜೊತೆ ಸೇರಿದ ರಸೆಲ್ ಬೌಂಡರಿ ಸಿಕ್ಸರ್ ಮೂಲಕ ಅಬ್ಬರಿಸಿದರು. ರಸೆಲ್ ಕೇವಲ 28 ಎಸೆತದಲ್ಲಿ 4 ಬೌಂಡರಿ 6 ಸಿಕ್ಸರ್ ಮೂಲಕ 62 ರನ್ ಸಿಡಿಸಿ ಔಟಾದರು. ರಸೆಲ್ ಬೆನ್ನಲ್ಲೇ ಅರ್ಧಶತಕ ಸಿಡಿಸಿದ ದಿನೇಶ್ ಕಾರ್ತಿಕ್ ವಿಕೆಟ್ ಪತನಗೊಂಡಿತು.ಅಂತಿಮವಾಗಿ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 185 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.