ಮುಂಬೈಗೆ ಮಣ್ಣು ಮುಕ್ಕಿಸಿದ ರಾಜಸ್ಥಾನ

Published : Apr 20, 2019, 07:47 PM IST
ಮುಂಬೈಗೆ ಮಣ್ಣು ಮುಕ್ಕಿಸಿದ ರಾಜಸ್ಥಾನ

ಸಾರಾಂಶ

ಟೂರ್ನಿಯಲ್ಲಿ ರಾಜಸ್ಥಾನ 3ನೇ ಗೆಲುವು ದಾಖಲಿಸುವ ಮೂಲಕ ಪ್ಲೇ ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಜೈಪುರ[ಏ.20]: ನಾಯಕ ಸ್ಟೀವ್ ಸ್ಮಿತ್ ಹಾಗೂ ಯುವ ಕ್ರಿಕೆಟಿಗ ರಿಯಾನ್ ಪರಾಗ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 5 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ರಾಜಸ್ಥಾನ 3ನೇ ಗೆಲುವು ದಾಖಲಿಸುವ ಮೂಲಕ ಪ್ಲೇ ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಮೊದಲಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಕೇವಲ 161 ರನ್’ಗಳಿಗೆ ನಿಯಂತ್ರಿಸಿದ್ದ ರಾಜಸ್ಥಾನ ತಂಡ ಉತ್ತಮ ಆರಂಭವನ್ನೇ ಪಡೆಯಿತು. ರಹಾನೆ-ಸ್ಯಾಮ್ಸನ್ ಜೋಡಿ ಮೊದಲ ವಿಕೆಟ್’ಗೆ 3.4 ಓವರ್’ಗಳಲ್ಲಿ 39 ರನ್ ಕಲೆಹಾಕಿತು. ರಹಾನೆ 12 ಎಸೆತಗಳಲ್ಲಿ 2 ಬೌಂಡರಿ ಸಹಿತ 12 ರನ್ ಬಾರಿಸಿ ರಾಹುಲ್ ಚಾಹರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಆ ಬಳಿಕ ನಾಯಕ ಸ್ಮಿತ್ ಜತೆಗೆ ಬ್ಯಾಟಿಂಗ್ ಮುಂದುವರೆಸಿದ ಸಂಜು ಸ್ಯಾಮ್ಸನ್ ತಂಡದ ರನ್ ಗಳಿಕೆಗೆ ಒತ್ತು ನೀಡಿದರು. ಸಂಜು 19 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 35 ರನ್ ಬಾರಿಸಿ ರಾಹುಲ್’ಗೆ ಎರಡನೇ ಬಲಿಯಾದರು. ಇದರ ಬೆನ್ನಲ್ಲೇ ಬೆನ್ ಸ್ಟೋಕ್ಸ್ ಶೂನ್ಯ ಸುತ್ತಿ ಬಂದ ದಾರಿಯಲ್ಲೇ ಪೆವಿಲಿಯನ್ ಸೇರಿದರು. ಆ ಬಳಿಕ ನಾಯಕ ಸ್ಮಿತ್ ಕೂಡಿಕೊಂಡ ಯುವ ಕ್ರಿಕೆಟಿಗ ರಿಯಾನ್ ಪರಾಗ್ ಆಕರ್ಷಕ ಜತೆಯಾಟದ ಮೂಲಕ ತಂಡವನ್ನು ಗೆಲುವಿನ ಸಮೀಪ ಕೊಂಡ್ಯೊಯ್ದರು.

ರಾಜಸ್ಥಾನಕ್ಕೆ ಸ್ಫರ್ಧಾತ್ಮಕ ಗುರಿ ನೀಡಿದ ಮುಂಬೈ

4ನೇ ವಿಕೆಟ್’ಗೆ ಈ ಜೋಡಿ 70 ರನ್’ಗಳ ಜತೆಯಾಟವಾಡಿದರು. ರಿಯಾನ್ ಪರಾಗ್ ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 43 ರನ್ ಬಾರಿಸಿ ರನೌಟ್ ಆದರು. ಆದರೆ ಕೊನೆವರೆಗೂ ಬ್ಯಾಟಿಂಗ್ ನಡೆಸಿದ ನಾಯಕ ಸ್ಮಿತ್ 48 ಎಸೆತಗಳಲ್ಲಿ 59 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!