IPL 2019: ರೈನಾ-ಜಡೇಜಾ ಹೋರಾಟ- ಗೆಲುವಿನ ಕೇಕೆ ಹಾಕಿದ CSK

Published : Apr 14, 2019, 07:42 PM ISTUpdated : Apr 14, 2019, 10:44 PM IST
IPL 2019: ರೈನಾ-ಜಡೇಜಾ ಹೋರಾಟ- ಗೆಲುವಿನ ಕೇಕೆ ಹಾಕಿದ CSK

ಸಾರಾಂಶ

ಐಪಿಎಲ್ ಟೂರ್ನಿಯಲ್ಲಿ KKR ಹಾಗೂ CSK ನಡುವಿನ ಪಂದ್ಯ ರೋಚಕ ಘಟ್ಟ ತಲುಪಿತ್ತು. ಕೋಲ್ಕತಾದಲ್ಲಿ ಆ್ಯಂಡ್ರೆ ರಸೆಲ್ ಆರ್ಭಟ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಸುರೇಶ್ ರೈನಾ ಹಾಗೂ ರವೀಂದ್ರ ಜಡೇತಾ ತಂಪೆರೆದರು. ಪಂದ್ಯದ ಹೈಲೆೈಟ್ಸ್ ಇಲ್ಲಿದೆ. 

ಕೋಲ್ಕತಾ(ಏ.14): ಕೋಲ್ಕತಾ ನೈಟ್ ರೈಡರ್ಸ್ ವಿರುದ್ದದ ಐಪಿಎಲ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ CSK ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರುವ ಕೆಕೆಆರ್ ಕನಸು ಕೈಗೂಡಲಿಲ್ಲ.  

ಗೆಲುವಿನ 162 ರನ್ ಟಾರ್ಗೆಟ್ ಪಡೆದಿದ್ದ CSK ಉತ್ತಮ ಆರಂಭ ಪಡೆಯಲಿಲ್ಲ. ಶೇನ್ ವ್ಯಾಟ್ಸನ್ ಕೇವಲ 6 ರನ್ ಸಿಡಿಸಿ ಔಟಾದರು. ಫಾಫ್ ಡುಪ್ಲೆಸಿಸ್ ಹಾಗೂ ಸುರೇಶ್ ರೈನಾ ಜೊತೆಯಾಟ ಕೂಡ ಹೆಚ್ಚು ಹೊತ್ತು ಇರಲಿಲ್ಲ. ಡುಪ್ಲಸಿಸ್ 24 ರನ್ ಸಿಡಿಸಿ ಔಟಾದರು. ಆದರೆ ರೈನಾ ಹೋರಾಟ ಮುಂದುವರಿಸಿದರು.

ಅಂಬಾಟಿ ರಾಯುಡು ಕೇವಲ 5 ರನ್ ಸಿಡಿಸಿ ನಿರ್ಗಮಿಸಿದರು. ಈ ಮೂಲಕ CSK ಆತಂಕ ಹೆಚ್ಚಿಸಿದರು. CSK ತಂಡಕ್ಕೆ ಆಧಾರವಾಗಿದ್ದ ಕೇದಾರ್ ಜಾಧವ್ 20 ರನ್ ಸಿಡಿಸಿ ಔಟಾದರು. ಇನ್ನು ನಾಯಕ ಧೋನಿ ಬ್ಯಾಟ್ ಸದ್ದು ಮಾಡಲಿಲ್ಲ. 

ಹೋರಾಟ ನೀಡಿದ ಸುರೇಶ್ ರೈನಾ ಅರ್ಧಶತಕ ಸಿಡಿಸಿದರು. ಹೀಗಾಗಿ ಅಂತಿಮ 12 ಎಸೆತದಲ್ಲಿ CSK ಗೆಲುವಿಗೆ 24 ರನ್ ಬೇಕಿತ್ತು. ರವೀಂದ್ರ ಜಡೇಜಾ ಹ್ಯಾಟ್ರಿಕ್ ಬೌಂಡರಿ ಸಿಡಿಸೋ ಮೂಲಕ ಗೆಲುವಿನ ಹಾದಿ ಸುಗಮಗೊಳಿಸಿದರು. ರೈನಾ ಅಜೇಯ 58 ಹಾಗೂ ಜಡೇಜಾ ಅಜೇಯ 31 ರನ್ ಸಿಡಿಸೋ ಮೂಲಕ , ಇನ್ನು 2 ಎಸೆತ ಬಾಕಿ ಇರುವಂತೆ ಚೆನ್ನೈ ಗೆಲುವು ಸಾಧಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?