
ಹೈದರಾಬಾದ್(ಏ.17): ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಲೀಗ್ ಪಂದ್ಯದಿಂದ CSK ನಾಯಕ ಎಂ.ಎಸ್.ಧೋನಿ ಹೊರಗುಳಿದಿದ್ದಾರೆ. ಧೋನಿ ಬದಲು ಸುರೇಶ್ ರೈನಾ ತಂಡವನ್ನು ಮುನ್ನಡೆಸಿದರು. ಬೆನ್ನು ನೋವಿಗೆ ತುತ್ತಾಗಿರುವ ಧೋನಿ ಈ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಧೋನಿ ಬದಲು ಸ್ಯಾಮ್ ಬಿಲ್ಲಿಂಗ್ಸ್ ತಂಡ ಸೇರಿಕೊಂಡರು.
ಐಪಿಎಲ್ ಟೂರ್ನಿಯಲ್ಲಿ ಧೋನಿ 2010ರಲ್ಲಿ ಒಂದು ಪಂದ್ಯದಿಂದ ಹೊರಗುಳಿದಿದ್ದರು. ಇದಾದ ಬಳಿಕ ಧೋನಿ ಐಪಿಎಲ್ ಟೂರ್ನಿಯ ಪಂದ್ಯಕ್ಕೆ ಅಲಭ್ಯರಾಗಿಲ್ಲ. ಸದಾ ಫಿಟ್ ಆಗಿರುವ ಧೋನಿ 2010ರ ಬಳಿಕ ಇದೇ ಮೊದಲ ಬಾರಿಗೆ ಇಂಜುರಿ ಕಾರಣದಿಂದ ಹೊರಗುಳಿದಿದ್ದಾರೆ.
ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಇಂಜುರಿಗೆ ತುತ್ತಾಗಿದ್ದ ಧೋನಿ, ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಮತ್ತೆ ಬೆನ್ನು ನೋವಿಗೆ ಗುರಿಯಾದರು. ವಿಶ್ವಕಪ್ ಟೂರ್ನಿ ದೃಷ್ಟಿಯಿಂದ ಧೋನಿಗೆ ವಿಶ್ರಾಂತಿ ಪಡೆಯುವುದು ಸೂಕ್ತ. 2019ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಧೋನಿ ಪ್ರಮುಖ ಪಾತ್ರ ನಿರ್ವಹಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.