
ಜೈಪುರ(ಡಿ.18): ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡಿಗನನ್ನ ಖರೀದಿಸಿದೆ. ಕರ್ನಾಟಕದ ಯುವ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ಗೆ 20 ಲಕ್ಷ ರೂಪಾಯಿ ನೀಡಿ ಆರ್ಸಿಬಿ ಖರೀದಿಸಿದೆ.
ಮೊದಲ ಸೆಶನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ವೆಸ್ಟ್ಇಂಡೀಸ್ ಯುವ ಬ್ಯಾಟ್ಸ್ಮನ್ ಶಿಮ್ರೊಮ್ ಹೆಟ್ಮೆಯರ್ ಅವರನ್ನ 4.2 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಇನ್ನು ಟೀಂ ಇಂಡಿಯಾ ಆಲ್ರೌಂಡರ್ ಗುರಕೀರತ್ ಸಿಂಗ್ ಮಾನ್ ಅವರನ್ನ 50 ಲಕ್ಷ ರೂಪಾಯಿ ನೀಡಿ ಆರ್ಸಿಬಿ ಖರೀದಿಸಿದೆ. ಆದರೆ ಎರಡನೇ ಸೆಶನ್ನಲ್ಲಿ ಆರ್ಸಿಬಿ ತಂಡ ಯಾರನ್ನೂ ಖರೀದಿಸಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.