ಹರಾಜಿನ ಬಳಿಕ ಒಂದಾದ ಗುರು-ಶಿಷ್ಯರು..! ತೆಂಡುಲ್ಕರ್ ಟ್ವೀಟ್ ಅಪ್ಪಟ ಬಂಗಾರ

Published : Dec 19, 2018, 05:02 PM ISTUpdated : Dec 19, 2018, 05:12 PM IST
ಹರಾಜಿನ ಬಳಿಕ ಒಂದಾದ ಗುರು-ಶಿಷ್ಯರು..! ತೆಂಡುಲ್ಕರ್ ಟ್ವೀಟ್ ಅಪ್ಪಟ ಬಂಗಾರ

ಸಾರಾಂಶ

ಆಟಗಾರರ ಹರಾಜಿಗೂ ಮುನ್ನವೇ ಕ್ವಿಂಟನ್ ಡಿ ಕಾಕ್ ಅವರನ್ನು ಸೆಳೆದುಕೊಂಡಿದ್ದ ಮುಂಬೈ ಇಂಡಿಯನ್ಸ್ ಇದೀಗ 12ನೇ ಆವೃತ್ತಿಯ ಹರಾಜಿನಲ್ಲಿ ಅನುಭವಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಲಸಿತ್ ಮಾಲಿಂಗ ಅವರನ್ನು ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಯುವಿಯನ್ನು ಈ ಬಾರಿ ರೀಟೈನ್ ಮಾಡಿಕೊಂಡಿರಲಿಲ್ಲ. 

ಮುಂಬೈ[ಡಿ.19]: ಮೂರು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ ಹಂತ ಪ್ರವೇಶಿಸಲು ವಿಫಲವಾಗಿತ್ತು. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ಸಾಕಷ್ಟು ಅಳೆದ ತೂಗಿ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 

Exclusive ಸಂದರ್ಶನ: RCB ತಂಡ ಸೇರಿಕೊಂಡ ಏಕೈಕ ಕನ್ನಡಿಗ ದೇವದತ್!

ಆಟಗಾರರ ಹರಾಜಿಗೂ ಮುನ್ನವೇ ಕ್ವಿಂಟನ್ ಡಿ ಕಾಕ್ ಅವರನ್ನು ಸೆಳೆದುಕೊಂಡಿದ್ದ ಮುಂಬೈ ಇಂಡಿಯನ್ಸ್ ಇದೀಗ 12ನೇ ಆವೃತ್ತಿಯ ಹರಾಜಿನಲ್ಲಿ ಅನುಭವಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಲಸಿತ್ ಮಾಲಿಂಗ ಅವರನ್ನು ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಯುವಿಯನ್ನು ಈ ಬಾರಿ ರೀಟೈನ್ ಮಾಡಿಕೊಂಡಿರಲಿಲ್ಲ. 

ಅಬ್ ಆಯೇಗಾ ಮಜಾ: ಮುಂಬೈ ಸೇರಿದ ಯುವಿ ಖಡಕ್ ವಾರ್ನಿಂಗ್..!

ಒಂದಾದ ಗುರು-ಶಿಷ್ಯರು:

ಐಪಿಎಲ್ 2019: ಯಾರು ಯಾವ ತಂಡಕ್ಕೆ- ಹರಾಜಿನ ಸಂಪೂರ್ಣ ಮಾಹಿತಿ

ಹರಾಜಿನಲ್ಲಿ ಯುವರಾಜ್ ಸಿಂಗ್ ಹಾಗೂ ಲಸಿತ್ ಮಾಲಿಂಗ ಅವರನ್ನು ಖರೀದಿಸಿದ್ದಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈ ಇಂಡಿಯನ್ಸ್ ಅನುಭವಿ ಹಾಗೂ ಯುವ ಆಟಗಾರರನ್ನೊಳಗೊಂಡ ಪರಿಪೂರ್ಣ ತಂಡವಾಗಿದೆ. ಅದರಲ್ಲೂ ಯುವರಾಜ್ ಸಿಂಗ್ ಹಾಗೂ ಲಸಿತ್ ಮಾಲಿಂಗ ನಮ್ಮ ತಂಡ ಕೂಡಿಕೊಂಡಿದ್ದು ಸಂತೋಷವಾಗಿದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೇಳಿದ್ದಾರೆ.

ರಾಜಸ್ಥಾನ ರಾಯಲ್ಸ್ ಫುಲ್ ಟೀಂ -ಉನಾದ್ಕಟ್‌ಗೆ 8.4 ಕೋಟಿ ಜಾಕ್‌ಪಾಟ್!

ಟೀಂ ಇಂಡಿಯಾದಲ್ಲಿ ಸಚಿನ್ ತೆಂಡುಲ್ಕರ್-ಯುವರಾಜ್ ಸಿಂಗ್ ಗುರುಶಿಷ್ಯರಂತೆ ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಅವಕಾಶ ಸಿಕ್ಕಾಗಲೆಲ್ಲಾ ಯುವಿ, ಸಚಿನ್ ಕಾಲುಮುಟ್ಟಿ ನಮಸ್ಕಾರ ಮಾಡುವುದನ್ನು ನಾವು ನೋಡಿದ್ದೇವೆ. 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಯುವರಾಜ್ ಪ್ರಮುಖ ಪಾತ್ರ ವಹಿಸಿದ್ದರು, ಅಲ್ಲದೇ ಈ ವಿಶ್ವಕಪ್ ಗೆಲುವಲ್ಲಿ ಸಚಿನ್’ಗೆ ಅರ್ಪಿಸಿದ್ದರು. ಇದೀಗ ಮತ್ತೊಮ್ಮೆ ಸಚಿನ್-ಯುವಿ ಜೋಡಿ ಜತೆಯಾಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?