ಚೆನ್ನೈನಿಂದ ಸ್ಥಳಾಂತರಗೊಂಡ ಐಪಿಎಲ್ ಪಂದ್ಯಗಳು..! ಸಿಎಸ್'ಕೆ ಅಭಿಮಾನಿಗಳಿಗೆ ನಿರಾಸೆ

Published : Apr 12, 2018, 03:36 PM ISTUpdated : Apr 14, 2018, 01:13 PM IST
ಚೆನ್ನೈನಿಂದ ಸ್ಥಳಾಂತರಗೊಂಡ ಐಪಿಎಲ್ ಪಂದ್ಯಗಳು..! ಸಿಎಸ್'ಕೆ ಅಭಿಮಾನಿಗಳಿಗೆ ನಿರಾಸೆ

ಸಾರಾಂಶ

‘ಪ್ರಸ್ತುತ ಇರುವ ಸನ್ನಿವೇಶದಲ್ಲಿ ಸೂಕ್ತ ಭದ್ರತೆ ಒದಗಿಸಲು ತಮ್ಮಿಂದ ಸಾಧ್ಯವಿಲ್ಲ ಎಂದು ಪೊಲೀಸರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಆದಕಾರಣ ಪಂದ್ಯಗಳು ಚೆನ್ನೈನಿಂದ ಬೇರೆಡೆ ಸ್ಥಳಾಂತರಿಸಬೇಕಾಗಿದೆ. ತನ್ನ ತವರನ್ನು ಪುಣೆಗೆ ಸ್ಥಳಾಂತರಗೊಳಿಸಲು ಚೆನ್ನೈ ಸೂಪರ್ ಕಿಂಗ್ಸ್ ಸಹ ವಿರೋಧ ವ್ಯಕ್ತಪಡಿಸಿಲ್ಲ’ ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಚೆನ್ನೈ(ಏ.12): ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಾವು ಐಪಿಎಲ್ ಪಂದ್ಯಾವಳಿಗೂ ತಾಕಿದೆ. ಆಟಗಾರರ ಭದ್ರತೆಯ ಹಿತದೃಷ್ಟಿಯಿಂದ ಚೆನ್ನೈನಲ್ಲಿ ನಡೆಯಬೇಕಾಗಿರುವ ಐಪಿಎಲ್ ಇನ್ನುಳಿದ 6 ಪಂದ್ಯಗಳು ಪುಣೆಗೆ ಸ್ಥಳಾಂತರಗೊಂಡಿವೆ.

‘ಪ್ರಸ್ತುತ ಇರುವ ಸನ್ನಿವೇಶದಲ್ಲಿ ಸೂಕ್ತ ಭದ್ರತೆ ಒದಗಿಸಲು ತಮ್ಮಿಂದ ಸಾಧ್ಯವಿಲ್ಲ ಎಂದು ಪೊಲೀಸರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಆದಕಾರಣ ಪಂದ್ಯಗಳು ಚೆನ್ನೈನಿಂದ ಬೇರೆಡೆ ಸ್ಥಳಾಂತರಿಸಬೇಕಾಗಿದೆ. ತನ್ನ ತವರನ್ನು ಪುಣೆಗೆ ಸ್ಥಳಾಂತರಗೊಳಿಸಲು ಚೆನ್ನೈ ಸೂಪರ್ ಕಿಂಗ್ಸ್ ಸಹ ವಿರೋಧ ವ್ಯಕ್ತಪಡಿಸಿಲ್ಲ’ ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ಸೇರಿದಂತೆ ಹಲವು ಸಂಘಟನೆಗಳು ಕಾವೇರಿ ನಿರ್ವಹಣಾ ಮಂಡಳಿ ರಚನೆ ಆಗುವ ತನಕ ಚೆನ್ನೈನಲ್ಲಿ ಪಂದ್ಯಗಳ ಆಯೋಜನೆಗೆ ಅವಕಾಶ ನೀಡಬಾರದು ಅಥವಾ ಪಂದ್ಯಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ. ಅಲ್ಲದೇ ಮಂಗಳವಾರ ಚೆನ್ನೈ ಹಾಗೂ ಕೋಲ್ಕತಾ ನೈಟ್‌'ರೈಡರ್ಸ್‌ ವಿರುದ್ಧ ನಡೆದ ಪಂದ್ಯಕ್ಕೂ ಪ್ರತಿಭಟನೆ ಬಿಸಿ ತಾಕಿತ್ತು. ಭಾರೀ ಭದ್ರತೆಯ ನಡುವೆಯೂ ಚೆನ್ನೈ ತಂಡದ ರವೀಂದ್ರ ಜಡೇಜಾರ ಮೇಲೆ ಶೂ ಎಸೆತದಂತಹ ಅಹಿತಕರ ಘಟನೆ ಸಹ ನಡೆದಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?