ಭಾರತ-ಐರ್ಲೆಂಡ್ ಟಿ20: ಕನ್ನಡಿಗನ ಪರ ಸೆಹ್ವಾಗ್ ಬ್ಯಾಟಿಂಗ್ ಮಾಡಿದ್ದೇಕೆ?

Published : Jun 27, 2018, 04:54 PM IST
ಭಾರತ-ಐರ್ಲೆಂಡ್ ಟಿ20: ಕನ್ನಡಿಗನ ಪರ ಸೆಹ್ವಾಗ್ ಬ್ಯಾಟಿಂಗ್ ಮಾಡಿದ್ದೇಕೆ?

ಸಾರಾಂಶ

ಇಂಗ್ಲೆಂಡ್ ಹಾಗೂ ವಿಶ್ವಕಪ್ ಟೂರ್ನಿ ದೃಷ್ಟಿಯಿಂದ ಭಾರತದ ತಂಡದ ಪ್ಲೇಯಿಂಗ್ ಇಲೆವೆನ್ ಕುರಿತು ಮಾಜಿ  ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.  ಭಾರತದ ಮಧ್ಯಮ ಕ್ರಮಾಂಕದಲ್ಲಿ ಯಾರಿಗೆ ಸ್ಥಾನ ನೀಡಬೇಕು? ಯಾರಿಗೆ ಕೊಕ್ ನೀಡಬೇಕು? ಈ ಕುರಿತು ಸೆಹ್ವಾಗ್ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್.

ಮುಂಬೈ(ಜೂ.27): ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ-ಟ್ವೆಂಟಿ ಪಂದ್ಯದಲ್ಲಿ ಕೆಎಲ್ ರಾಹುಲ್‌ಗೆ ಸ್ಥಾನ ಕಲ್ಪಿಸಬೇಕು ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಆಗ್ರಹಿಸಿದ್ದಾರೆ. ಇಂಗ್ಲೆಂಡ್ ಹಾಗೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಕೆಎಲ್ ರಾಹುಲ್‌ಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಸೆಹ್ವಾಗ್ ಹೇಳಿದ್ದಾರೆ.

ರಾಹುಲ್‌ಗೆ ತಂಡದಲ್ಲಿ ಸ್ಥಾನ ಕಲ್ಪಿಸೋದರಿಂದ ಭಾರತದ ಬ್ಯಾಟಿಂಗ್ ಮತ್ತಷ್ಟು ಬಲಷ್ಠಗೊಳ್ಳಲಿದೆ. ಸದ್ಯ ರಾಹುಲ್‌ಗಾಗಿ, ವಿಕೆಟ್ ಕೀಪರ್ ಕಮ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅನಿವಾರ್ಯವಾಗಿ ಹೊರಗುಳಿಬೇಕಾಗುತ್ತೆ ಎಂದು ವೀರೂ ಹೇಳಿದ್ದಾರೆ. ನಿಧಾಸ್ ಟ್ರೋಫಿಯಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ ಪ್ರಶಸ್ತಿ ಗೆಲ್ಲಿಸಿಕೊಟ್ಟಿದ್ದರು. ಆದರೆ ಸದ್ಯ ರಾಹುಲ್‌ಗೆ ಸ್ಥಾನ ನೀಡುವುದು ಸೂಕ್ತ ಎಂದಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕಣಕ್ಕಿಳಿದು ಅದ್ಬುತ ಪ್ರದರ್ಶನ ನೀಡಿದ್ದರು. ವಿರೇಂದ್ರ ಸೆಹ್ವಾಗ್ ಮಾರ್ಗದರ್ಶನದಲ್ಲಿ ರಾಹುಲ್ ಉತ್ತಮ ಲಯ ಕಂಡುಕೊಂಡಿದ್ದರು. ಹೀಗಾಗಿ ರಾಹುಲ್ ಬ್ಯಾಟಿಂಗ್ ಹಾಗೂ ಪ್ರತಿಭೆ ಕುರಿತು ಸ್ಪಷ್ಟ ಅರಿತಿರುವ ಸೆಹ್ವಾಗ್, ಕನ್ನಡಿಗನ ಪರ ಬ್ಯಾಟಿಂಗ್ ಮಾಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ