ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಮಾಲೀಕ ಸಚಿನ್ ತೆಂಡೂಲ್ಕರ್ ನೀಡಿದ್ರು ಶಾಕ್!

Published : Sep 16, 2018, 04:31 PM ISTUpdated : Sep 19, 2018, 09:27 AM IST
ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಮಾಲೀಕ ಸಚಿನ್ ತೆಂಡೂಲ್ಕರ್ ನೀಡಿದ್ರು ಶಾಕ್!

ಸಾರಾಂಶ

ಐಎಸ್ಎಲ್ ಫುಟ್ಬಾಲ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ತಂಡಗಳ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಸಹ ಮಾಲೀಕ ಸಚಿನ್ ತೆಂಡೂಲ್ಕರ್ ಬಿಗ್ ಶಾಕ್ ನೀಡಿದ್ದಾರೆ.

ಮುಂಬೈ(ಸೆ.16): 5ನೇ ಆವೃತ್ತಿ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿ ಆರಂಭಕ್ಕೆ ಕೆಲ ದಿನಗಳು ಮಾತ್ರ ಬಾಕಿ. ಆದರೆ ಟೂರ್ನಿ ಆರಂಭದಿಂದ ನಾಲ್ಕು ಆವೃತ್ತಿಗಳಲ್ಲಿ ಕೇರಳ ಬ್ಲಾಸ್ಟರ್ಸ್ ತಂಡದ ಸಹ ಮಾಲೀಕನಾಗಿದ್ದ ಮಾಸ್ಟರ್ ಬ್ಲಾಸ್ಟರ್ಸ್ ಸಚಿನ್ ತೆಂಡೂಲ್ಕರ್ ಇದೀಗ ತಂಡದಿಂದ ಹೊರಬಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಜೊತೆ ಉದ್ಯಮಿ ನಿಮ್ಮಗಡ್ಡ ಪ್ರಸಾದ್, ನಟ ಅಲ್ಲು ಅರ್ಜುನ್, ನಾಗಾರ್ಜುನ್ ಹಾಗೂ ಚಿರಂಜೀವಿ ಕೇರಳ ಬ್ಲಾಸ್ಟರ್ಸ್ ತಂಡದ ಮಾಲೀಕರಾಗಿದ್ದಾರೆ. ಆದರೆ ಇದೀಗ ಸಚಿನ್ ತೆಂಡೂಲ್ಕರ್ ಸಹ ಮಾಲೀಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ.

ತಂಡ ಹಾಗೂ ಫ್ರಾಂಚೈಸಿ ಮಾಲೀಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದೇನೆ. ಸದ್ಯ ತಂಡ ದೈತ್ಯವಾಗಿ ಬೆಳೆದಿದೆ. ನಾನು ತಂಡದಿಂದ ಹೊರಗುಳಿದರೂ, ನನ್ನ ಮನಸ್ಸು ಕೇರಳ ಬ್ಲಾಸ್ಟರ್ಸ್ ತಂಡಕ್ಕಾಗಿ ಮಿಡಿಯುತ್ತಿರುತ್ತದೆ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.  

ವೈಯುಕ್ತಿಕ ಕಾರಣದಿಂದ ತಂಡದ ಫ್ರಾಂಚೈಸಿ ಮಾಲೀಕತ್ವದಿಂದ ಹಿಂದೆ ಸರಿಯುತ್ತಿದ್ದೇನೆ. ಕೇರಳ ಜನರ ಪ್ರೀತಿ, ತಂಡದ ಅಭಿಮಾನಿಗಳು ಪ್ರೀತಿಗೆ ಚಿರಋಣಿ ಎಂದು ಸಚಿನ್ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup: ಪಾಕಿಸ್ತಾನ ಎದುರು ಮುಗ್ಗರಿಸಿದ 14 ವರ್ಷದ ವೈಭವ್ ಸೂರ್ಯವಂಶಿ; ಸ್ಪರ್ಧಾತ್ಮಕ ಮೊತ್ತದತ್ತ ಯುವ ಪಡೆ ದಾಪುಗಾಲು
ಸಂಜು ಇನ್, ಗಿಲ್ ಔಟ್: ಮೂರನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ; ಯಾರಿಗೆಲ್ಲಾ ಸಿಗಲಿದೆ ಚಾನ್ಸ್?