ಚೆನ್ನೈ ಟೆಸ್ಟ್'ಗೆ ಆ್ಯಂಡರ್ಸನ್ ಅಲಭ್ಯ

Published : Dec 15, 2016, 01:02 PM ISTUpdated : Apr 11, 2018, 12:57 PM IST
ಚೆನ್ನೈ ಟೆಸ್ಟ್'ಗೆ ಆ್ಯಂಡರ್ಸನ್ ಅಲಭ್ಯ

ಸಾರಾಂಶ

ಈ ಸರಣಿಯ ಆರಂಭಕ್ಕೂ ಮುನ್ನ ಬಲ ಭುಜದ ನೋವಿನಿಂದ ಬಳಲುತ್ತಿದ್ದ ಆ್ಯಂಡರ್ಸನ್, ರಾಜ್‌'ಕೋಟ್‌'ನಲ್ಲಿ ನಡೆದಿದ್ದ ಸರಣಿಯ ಮೊದಲ ಪಂದ್ಯಕ್ಕೂ ಅಲಭ್ಯರಾಗಿದ್ದರು.

ನವದೆಹಲಿ(ಡಿ.15): ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅವರನ್ನು ಡಿ. 16ರಿಂದ ಚೆನ್ನೈನಲ್ಲಿ ಆರಂಭಗೊಳ್ಳಲಿರುವ ಭಾರತ ವಿರುದ್ಧದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದೆ.

ಮುಂಬೈ ಟೆಸ್ಟ್ ಪಂದ್ಯದ ಬಳಿಕ ಆ್ಯಂಡರ್ಸನ್ ಅವರು ಬಳಲಿರುವ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲು ತಂಡದ ವ್ಯವಸ್ಥಾಪಕ ಮಂಡಳಿ ಉದ್ದೇಶಿಸಿದೆ. ಹಾಗಾಗಿ ಐದನೇ ಟೆಸ್ಟ್ ಪಂದ್ಯದಿಂದ ಅವರನ್ನು ಕೈಬಿಡಲಾಗಿದೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

ಈ ಸರಣಿಯ ಆರಂಭಕ್ಕೂ ಮುನ್ನ ಬಲ ಭುಜದ ನೋವಿನಿಂದ ಬಳಲುತ್ತಿದ್ದ ಆ್ಯಂಡರ್ಸನ್, ರಾಜ್‌'ಕೋಟ್‌'ನಲ್ಲಿ ನಡೆದಿದ್ದ ಸರಣಿಯ ಮೊದಲ ಪಂದ್ಯಕ್ಕೂ ಅಲಭ್ಯರಾಗಿದ್ದರು.

ಇಂಗ್ಲೆಂಡ್ ಪರ ಗರಿಷ್ಟ ವಿಕೆಟ್ ಪಡೆದು ಸಾಧನೆ ಮಾಡಿರುವ ಜಿಮ್ಮಿ, ಈ ಬಾರಿಯ ಸರಣಿಯಲ್ಲಿ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ ದಾಖಲೆ, ಜಾರ್ಖಂಡ್‌ ವಿರುದ್ಧ 413 ರನ್‌ ಬೆನ್ನಟ್ಟಿ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟ್ರೋಫಿ ಕಮ್‌ಬ್ಯಾಕ್‌ ಪಂದ್ಯದಲ್ಲಿ ಶತಕ ಚಚ್ಚಿದ ಕಿಂಗ್ ಕೊಹ್ಲಿ! ವಿರಾಟ್‌ಗಿದು ಕಳೆದ 4 ಪಂದ್ಯಗಳಲ್ಲಿ 3ನೇ ಶತಕ