ಬಿಸಿಸಿಐ ಕ್ಷಮೆ ಕೋರಿದ ಗೌತಮ್; ಏನಿದು ಸ್ಟೋರಿ..?

Published : Oct 04, 2017, 12:46 PM ISTUpdated : Apr 11, 2018, 12:56 PM IST
ಬಿಸಿಸಿಐ ಕ್ಷಮೆ ಕೋರಿದ ಗೌತಮ್; ಏನಿದು ಸ್ಟೋರಿ..?

ಸಾರಾಂಶ

ದುಲೀಪ್ ಟ್ರೋಫಿ ಮೊದಲ ಪಂದ್ಯದ ವೇಳೆ ಭಾರತ ರೆಡ್ ತಂಡದಲ್ಲಿ ಆಡಿ 5 ವಿಕೆಟ್ ಕಬಳಿಸಿದ್ದ ಗೌತಮ್, ಪಂದ್ಯದ ಬಳಿಕ ಟೈಫಾಯ್ಡ್ ಕಾರಣ ಬೆಂಗಳೂರಿಗೆ ವಾಪಸಾಗಿದ್ದರು. ನಂತರ ಕರ್ನಾಟಕ ಪ್ರೀಮಿಯರ್ ಲೀಗ್'ನಲ್ಲಿ ಆಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಕಾರಣ ಅವರನ್ನು ದುಲೀಪ್ ಟ್ರೋಫಿ ಹಾಗೂ ಭಾರತ ‘ಎ’ ತಂಡಗಳಿಂದ ಕೈಬಿಡಲಾಗಿತ್ತು.

ಬೆಂಗಳೂರು(ಅ.04): ಕರ್ನಾಟಕದ ಆಫ್ ಸ್ಪಿನ್ನರ್ ಕೆ. ಗೌತಮ್ ಬಿಸಿಸಿಐ ಬೇಷರತ್ತಾದ ಕ್ಷಮೆ ಕೋರಿದ್ದಾರೆ. ಗೌತಮ್ ಕ್ಷಮೆ ಕೋರಿ ಬರೆದಿರುವ ಪತ್ರವನ್ನು ಬಿಸಿಸಿಐ, ತನ್ನ ಶಿಸ್ತು ಸಮಿತಿಗೆ ತಲುಪಿಸಿದೆ. ಗೌತಮ್ ಮುಂದಿನ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದೋ ಇಲ್ಲವೋ ಎನ್ನುವುದನ್ನು ಶಿಸ್ತು ಸಮಿತಿ ನಿರ್ಧರಿಸಲಿದೆ.

ದುಲೀಪ್ ಟ್ರೋಫಿ ಮೊದಲ ಪಂದ್ಯದ ವೇಳೆ ಭಾರತ ರೆಡ್ ತಂಡದಲ್ಲಿ ಆಡಿ 5 ವಿಕೆಟ್ ಕಬಳಿಸಿದ್ದ ಗೌತಮ್, ಪಂದ್ಯದ ಬಳಿಕ ಟೈಫಾಯ್ಡ್ ಕಾರಣ ಬೆಂಗಳೂರಿಗೆ ವಾಪಸಾಗಿದ್ದರು. ನಂತರ ಕರ್ನಾಟಕ ಪ್ರೀಮಿಯರ್ ಲೀಗ್'ನಲ್ಲಿ ಆಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಕಾರಣ ಅವರನ್ನು ದುಲೀಪ್ ಟ್ರೋಫಿ ಹಾಗೂ ಭಾರತ ‘ಎ’ ತಂಡಗಳಿಂದ ಕೈಬಿಡಲಾಗಿತ್ತು.

ಬಿಸಿಸಿಐ ಪ್ರಧಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ, ಗೌತಮ್‌'ಗೆ ಶೋಕಾಸ್ ನೋಟಿಸ್ ನೀಡಿದ್ದರು. ಸದ್ಯ ಕ್ಷಮೆ ಕೋರಿರುವ ಗೌತಮ್ ತಾವು ಕೆಪಿಎಲ್ ಪಂದ್ಯದಲ್ಲಿ ಆಡಿದ್ದಕ್ಕೆ ವಿವರಣೆ ನೀಡಿದ್ದಾರೆ. ‘ನಾನು ಟೈಫಾಯ್ಡ್ ಅಂದುಕೊಂಡಿದ್ದೆ. ಆದರೆ ಅದು ವೈರಾಣು ಜ್ವರ ಎಂದು ನನಗೆ ನಂತರ ತಿಳಿಯಿತು’ ಎಂದು ಬರೆದಿದ್ದಾರೆ.

ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಜ್ಯೋತಿರಾದಿತ್ಯ ಸಿನ್ಹಾ ಹಾಗೂ ನಿರಂಜನ್ ಶಾ ಅವರನ್ನೊಳಗೊಂಡ ಶಿಸ್ತು ಸಮಿತಿ, ಗೌತಮ್ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಸ್ಥಾನ್ ರಾಯಲ್ಸ್ ಖರೀದಿಗೆ 'ಉಕ್ಕಿನ ಮನುಷ್ಯ' ಎಂಟ್ರಿ: ಬಿರ್ಲಾ ಗ್ರೂಪ್‌ಗೆ ಟಕ್ಕರ್ ಕೊಡಲು ಬಂದ ಮಿತ್ತಲ್ ಫ್ಯಾಮಿಲಿ!
JSW ಇಂಡಿಯನ್ ಓಪನ್ ಸ್ಕ್ವಾಷ್ ಸಂಭ್ರಮ; ಮುಂಬೈನಲ್ಲಿ ನಾಳೆಯಿಂದ ಹೈ-ವೋಲ್ಟೇಜ್ ಪಂದ್ಯ!