
ಜರ್ಮನಿ(ಮಾ.03): ಜರ್ಮನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಬೇಕೆಂಬ ಭಾರತದ ಯುವ ಆಟಗಾರ ಕಿಡಾಂಬಿ ಶ್ರೀಕಾಂತ್'ಗೆ ಭ್ರಮನಿರಸನವಾಗಿದೆ.
ಗುರುವಾರ ತಡರಾತ್ರಿ ನಡೆದ ಪ್ರಿಕ್ವಾರ್ಟರ್'ಫೈನಲ್ ಸೆಣಸಾಟದಲ್ಲಿ ಹಾಲಿ ಒಲಿಂಪಿಕ್ ಚಾಂಪಿಯನ್, ಚೀನಾದ ಚೆನ್ ಲಾಂಗ್ ವಿರುದ್ಧ ದಿಟ್ಟ ಹೋರಾಟದ ಹೊರತಾಗಿಯೂ 19-21, 20-22ರ ಎರಡು ನೇರ ಗೇಮ್'ಗಳಲ್ಲಿ ಶ್ರೀಕಾಂತ್ ಸೋಲನೊಪ್ಪಿಕೊಂಡರು. 47 ನಿಮಿಷಗಳ ಎರಡೂ ಗೇಮ್'ಗಳು ರೋಚಕತೆಯ ಗೂಡಾಗಿತ್ತು. ಆದರೆ, ಆಕ್ರಮಣಕಾರಿ ಚೆನ್ ಲಾಂಗ್, ಕಡೆಗೂ ವಿಜಯಶಾಲಿಯಾದರು.
12ನೇ ಶ್ರೇಯಾಂಕಿತ ಶ್ರೀಕಾಂತ್ ಸೋಲಿನೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯ ಕಂಡಂತಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.