
ದುಬೈ(ಜೂ.23): ಕಬಡ್ಡಿ ಮಾಸ್ಟರ್ಸ್ ದುಬೈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನ ಮಣಿಸಿದ ಭಾರತ, ದ್ವಿತೀಯ ಪಂದ್ಯದಲ್ಲಿ ಕೀನ್ಯಾ ವಿರುದ್ಧ ಗೆಲುವಿನ ನಗೆ ಬೀರಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 2 ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ ಕಾಪಾಡಿಕೊಂಡಿದೆ.
ಪಂದ್ಯದ ಆರಂಭದಲ್ಲೇ ಭಾರತ ಮೇಲುಗೈ ಸಾಧಿಸಿತು. ಮೊದಲ ರೈಡ್ನಲ್ಲೇ ಅಜಯ್ ಠಾಕೂರ್ ಪಾಯಿಂಟ್ಸ್ ಕಬಳಿಸಿದರು. ಚಾಂಪಿಯನ್ ತಂಡ ಭಾರತದ ವಿರುದ್ಧ ಕೀನ್ಯಾ ಹೋರಾಟ ಅಂಕಗಳಿಸಲು ಪರದಾಡಿತು. ಭರ್ಜರಿ ಮುನ್ನಡೆ ಸಾಧಿಸಿದ ಭಾರತ ಮೊದಲಾರ್ಧದ ಅಂತ್ಯದಲ್ಲಿ 27-9 ಅಂಕಗಳ ಮುನ್ನಡೆ ಕಾಯ್ದುಕೊಂಡಿತು.
ದ್ವಿತಿಯಾರ್ಧದ ಆರಂಭದಲ್ಲೇ ಸೂಪರ್ ರೈಡ್ ಮೂಲಕ ಅಂಕಗಳ ಸುರಿಮಳೆ ಸುರಿದ ಭಾರತ ಭಾರಿ ಮುನ್ನಡೆ ಪಡೆದುಕೊಂಡಿತು. ಭಾರತದ ಆರ್ಭಟಕ್ಕೆ ಕೀನ್ಯಾ ತಬ್ಬಿಬಾಯಿತು. ಅದ್ಬುತ ಪ್ರದರ್ಶನ ನೀಡಿದ ಭಾರತ ತಂಡ 48-19 ಅಂಕಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.