
ನವದೆಹಲಿ[ಆ.06]: ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಗೆ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಮಾಡಲು ಬಿಸಿಸಿಐ ಕಾನೂನು ತಂಡ ಹಸಿರು ನಿಶಾನೆ ತೋರಿದೆ.
ಕಪಿಲ್ ನೇತೃತ್ವದಲ್ಲಿ ಟೀಂ ಇಂಡಿಯಾ ಕೋಚ್ ಆಯ್ಕೆ?
ಆಯ್ಕೆ ಸಮಿತಿ ಸದಸ್ಯರಾದ ಕಪಿಲ್ ದೇವ್, ಆನ್ಶುಮಾನ್ ಗಾಯಕ್ವಾಡ್ ಹಾಗೂ ಶಾಂತಾ ರಂಗಸ್ವಾಮಿ ಸ್ವಹಿತಾಸಕ್ತಿ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸಾಬೀತು ಪಡಿಸಬೇಕಾದ ಅನಿವಾರ್ಯತೆ ಬಿಸಿಸಿಐಗೆ ಎದುರಾಗಿತ್ತು. ಆ ಸಮಸ್ಯೆ ಬಗೆಹರಿದ ಬಳಿಕ, ಸಲಹಾ ಸಮಿತಿಗೆ ಕೋಚ್ ಆಯ್ಕೆ ಮಾಡುವ ಅಧಿಕಾರ ಸಿಕ್ಕಿದೆ.
ಭಾರತ ಕೋಚ್ ಹುದ್ದೆಗೆ 2000 ಅರ್ಜಿ; BCCIಗೆ ಅಚ್ಚರಿ!
ಮುಂದಿನ ವಾರ ಅಭ್ಯರ್ಥಿಗಳ ಸಂದರ್ಶನ ನಡೆಸುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ ನೇಮಿತ ಬಿಸಿಸಿಐ ಆಡಳಿತ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ತಿಳಿಸಿದ್ದಾರೆ. ಕೋಚ್ ಸ್ಪರ್ಧೆಯಲ್ಲಿ ಹಾಲಿ ಕೋಚ್ ರವಿಶಾಸ್ತ್ರಿ ಸೇರಿದಂತೆ ಮಹೆಲಾ ಜಯವರ್ಧನೆ, ಟಾಮ್ ಮೂಡಿ ಮುಂತಾದ ದಿಗ್ಗಜ ಕ್ರಿಕೆಟಿಗರಿದ್ದು, ಭಾರತ ತಂಡದ ಕೋಚ್ ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.