
ಮುಂಬೈ(ಜ.24): ಟೀಂ ಇಂಡಿಯಾ ಕ್ರಿಕೆಟ್ ತಾರೆಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ವೃತ್ತಿ ಬದುಕಿಗೆ ಕಂಠಕವಾಗಿ ಪರಿಣಮಿಸಿದ ’ಕಾಫಿ ವಿತ್ ಕರಣ್’ ಟಿವಿ ಶೋ ಬಗ್ಗೆ ಇದೇ ಮೊದಲ ಬಾರಿಗೆ ನಿರೂಪಕ ಕರುಣ್ ಜೊಹರ್ ಮನಬಿಚ್ಚಿ ಮಾತನಾಡಿದ್ದಾರೆ.
ಕೊಹ್ಲಿ ಮಾಡಿದ್ರೆ ರೈಟ್- ಪಾಂಡ್ಯ,ರಾಹುಲ್ ರಾಂಗ್: ಬಿಸಿಸಿಐನಿಂದ ಇಬ್ಬಗೆ ನೀತಿ!
‘ಕಾಫಿ ವಿತ್ ಕರಣ್’ ಟೀವಿ ಶೋ ನಿರೂಪಕ ಹಾಗೂ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್, ವಿವಾದದಲ್ಲಿ ಸಿಲುಕಿರುವ ಕ್ರಿಕೆಟಿಗರಾದ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯಗೆ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಸಂಭಾಷಣೆ ವೇಳೆ ಮಹಿಳಾ ಅವಹೇಳನಕಾರಿ ಮಾತುಗಳ ಮೂಲಕ ಮಿತಿ ಮೀರಿದ್ದಕ್ಕೂ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕರಣ್ ಹೇಳಿದ್ದಾರೆ.
ಪಾಂಡ್ಯ, ರಾಹುಲ್ ಸಸ್ಪೆಂಡ್: ಸರಣಿಯಿಂದ ಗೇಟ್’ಪಾಸ್
ಈ ಪ್ರಮಾದವನ್ನು ಹೇಗೆ ಸರಿಪಡಿಸುವುದು ಎಂದು ಹಲವು ಬಾರಿ ನಿದ್ದೆಗೆಟ್ಟು ಯೋಚಿಸಿದ್ದೇನೆ. ಎಪಿಸೋಡ್ನಲ್ಲಿ ನಡೆದ ಸಂಭಾಷಣೆಯನ್ನು ನಾನು ಸಮರ್ಥಿಸಿಕೊಳ್ಳುತ್ತಿಲ್ಲ. ಆದರೆ ನಡೆದ ಘಟನೆಗಳು ನಾವು ಮಿತಿಮೀರಿ ಮಾತನಾಡಿದ್ದೇವೆ ಎಂಬುದನ್ನು ಮನವರಿಕೆ ಮಾಡುತ್ತವೆ. ಅದು ನನ್ನ ವೇದಿಕೆಯಲ್ಲಿಯೇ ನಡೆದಿರುವುದರಿಂದ ಕ್ಷಮೆ ಕೇಳುವುದಾಗಿ’ ಕರಣ್ ಹೇಳಿದ್ದಾರೆ.
ಪಾಂಡ್ಯ ಕಾಮೋತ್ತೇಜಕ ಹೇಳಿಕೆ: ಯಾಕಪ್ಪಾ ಅಂದೆ ಎಂದು ಕೇಳಿದ ಬಿಸಿಸಿಐ
ಕಾಫಿ ವಿತ್ ಕರುಣ್ ಕಾರ್ಯಕ್ರಮದಲ್ಲಿ ಸೆಕ್ಸಿ ಕಾಮೆಂಟ್ ಮಾಡುವ ಮೂಲಕ ಬಿಸಿಸಿಐ ಅವಕೃಪೆಗೆ ಗುರಿಯಾಗಿರುವ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್’ಗಳ ಸರಣಿಯಿಂದ ಹೊರದಬ್ಬಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.