
ಬೆಂಗಳೂರು(ಸೆ.09): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರು ಕರ್ನಾಟಕ ಚಲನ ಚಿತ್ರ ಟೂರ್ನಿಯಲ್ಲಿ ಸ್ಯಾಂಡಲ್ವುಡ್ ಸ್ಟಾರ್ ಯಶ್ ನೇತೃತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ಗೆಲುವಿನ ನಗೆ ಬೀರಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡದ ವಿರುದ್ಧ ಯಶ್ ಸೈನ್ಯ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪುನೀತ್ ತಂಡ 109 ರನ್ಗಳಿಸಲಷ್ಟೇ ಸಾಧ್ಯವಾಗಿತ್ತು.
110ರನ್ ಟಾರ್ಗೆಟ್ ಪಡೆದ ಯಶ್ ಸೈನ್ಯ, ಕೇವಲ 7.5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಸ್ಟಾಲಿನ್ ಹೂವರ್ ಅಜೇಯ 72 ಹಾಗೂ ಕೃಷ್ಣ ಅಜೇಯ 22 ರನ್ಗಳ ನೆರವಿನಿಂದ ರಾಷ್ಟ್ರಕೂಟ ತಂಡ ಸುಲಭ ಗೆಲುವು ಸಾಧಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.