ರಾಜ್ಯದ ಕ್ರೀಡಾ ಸಾಧಕರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಾತಿ ಪತ್ರ ವಿತರಣೆ

Published : Aug 04, 2024, 01:17 PM ISTUpdated : Aug 05, 2024, 10:26 AM IST
ರಾಜ್ಯದ ಕ್ರೀಡಾ ಸಾಧಕರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಾತಿ ಪತ್ರ ವಿತರಣೆ

ಸಾರಾಂಶ

ಪ್ಯಾರಾಲಿಂಪಿಕ್ಸ್‌ ಚಿನ್ನ ಗೆದ್ದಿರುವ ರಾಜ್ಯದ ಏಕೈಕ ಅಥ್ಲೀಟ್‌ ಎಚ್‌.ಎನ್‌.ಗಿರೀಶ್‌, ಪ್ಯಾರಾ ಏಷ್ಯಾಡ್‌ ಪದಕ ವಿಜೇತ ರಕ್ಷಿತಾ ರಾಜು, ರಾಧಾ ವೆಂಕಟೇಶ್‌, ಶಕೀನಾ ಖಾತೂನ್‌ ಸೇರಿ ಹಲವು ಸಾಧಕರು ನೇಮಕಾತಿ ಪತ್ರ ಸ್ವೀಕರಿಸಲಿದ್ದಾರೆ

ಬೆಂಗಳೂರು: ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಭಾನುವಾರ ರಾಜ್ಯ ಸರ್ಕಾರ ನೇಮಕಾತಿ ಪತ್ರ ವಿತರಿಸಲಿದೆ. ಸಿಎಂ ಅಧಿಕೃತ ನಿವಾಸ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಾತಿ ಪತ್ರ ವಿತರಿಸಲಿದ್ದಾರೆ.

ಪ್ಯಾರಾಲಿಂಪಿಕ್ಸ್‌ ಚಿನ್ನ ಗೆದ್ದಿರುವ ರಾಜ್ಯದ ಏಕೈಕ ಅಥ್ಲೀಟ್‌ ಎಚ್‌.ಎನ್‌.ಗಿರೀಶ್‌, ಪ್ಯಾರಾ ಏಷ್ಯಾಡ್‌ ಪದಕ ವಿಜೇತ ರಕ್ಷಿತಾ ರಾಜು, ರಾಧಾ ವೆಂಕಟೇಶ್‌, ಶಕೀನಾ ಖಾತೂನ್‌ ಸೇರಿ ಹಲವು ಸಾಧಕರು ನೇಮಕಾತಿ ಪತ್ರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಲಿಂಪಿಕ್ಸ್‌ ಹಾಕಿ: ಕ್ವಾರ್ಟರ್‌ನಲ್ಲಿ ಭಾರತಕ್ಕಿಂದು ಬಲಿಷ್ಠ ಬ್ರಿಟನ್‌ ಸವಾಲು

ಒಲಿಂಪಿಕ್ಸ್‌, ಪ್ಯಾರಾಲಿಂಪಿಕ್ಸ್‌, ಏಷ್ಯನ್‌ ಗೇಮ್ಸ್‌, ಪ್ಯಾರಾ ಏಷ್ಯನ್‌ ಗೇಮ್ಸ್‌, ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ವಿಶೇಷ ಸಾಧನೆ ಮಾಡಿದ ರಾಜ್ಯದ ಅಥ್ಲೀಟ್‌ಗಳಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರಿ ನೀಡುವುದಾಗಿ ರಾಜ್ಯ ಸರ್ಕಾರ ಕಳೆದ ವರ್ಷ ಮಾರ್ಚ್‌ನಲ್ಲೇ ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆ ಪ್ರಕಾರ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್‌ ಪದಕ ವಿಜೇತರಿಗೆ ಗ್ರೂಪ್‌-ಎ, ಏಷ್ಯನ್‌ ಗೇಮ್ಸ್‌, ಪ್ಯಾರಾ ಏಷ್ಯನ್‌ ಗೇಮ್ಸ್‌, ಕಾಮನ್‌ವೆಲ್ತ್ ಗೇಮ್ಸ್‌ ಸಾಧಕರಿಗೆ ಗ್ರೂಪ್‌-ಡಿ ಹುದ್ದೆ ಲಭಿಸಲಿದೆ. ಇದಕ್ಕೆ ಸಂಬಂಧಿಸಿದಂತೆ ಕಳೆದ ಜನವರಿಯಲ್ಲಿ ಅಥ್ಲೀಟ್‌ಗಳಿಂದ ಸರ್ಕಾರ ಅರ್ಜಿ ಆಹ್ವಾನಿಸಿತ್ತು.

ರಾಜ್ಯ ಅಥ್ಲೆಟಿಕ್ಸ್‌: ಸ್ನೇಹಾ, ಉನ್ನತಿಗೆ ಚಿನ್ನದ ಪದಕ

ಬೆಂಗಳೂರು: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಉನ್ನತಿ ಅಯ್ಯಪ್ಪ ಎರಡು, ಸ್ನೇಹಾ ಎಚ್‌.ಎಸ್‌. 1 ಚಿನ್ನದ ಪದಕ ಗೆದ್ದಿದ್ದಾರೆ. ಕೂಟದ ಮೊದಲ ದಿನವಾದ ಶನಿವಾರ ಮಹಿಳೆಯರ 100 ಮೀ. ಹರ್ಡಲ್ಸ್‌ನಲ್ಲಿ ಉನ್ನತಿ 14.10 ಸೆಕೆಂಡ್‌ಗಳಲ್ಲಿ ಕ್ರಮಿಸಿದರೆ, 200 ಮೀ. ಓಟದಲ್ಲಿ 23.50 ಸೆಕೆಂಡ್‌ಗಲ್ಲಿ ಗುರಿ ತಲುಪಿದರು. 100 ಮೀ. ಓಟದ ಸ್ಪರ್ಧೆಯಲ್ಲಿ ಸ್ನೇಹಾ 11.3 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನ ಜಯಿಸಿದರು. 

ಮಹಿಳೆಯರ ಲಾಂಗ್‌ಜಂಪ್‌ನಲ್ಲಿ ಪಾವನಾ ನಾಗರಾಜ್‌, ಜಾವೆಲಿನ್‌ ಎಸೆತದಲ್ಲಿ ರಮ್ಯಶ್ರೀ, ಪುರುಷರ ಲಾಂಗ್‌ಜಂಪ್‌ನಲ್ಲಿ ಪುರುಷೋತ್ತಮ್‌, ಪುರುಷರ ಹ್ಯಾಮರ್‌ ಎಸೆತದಲ್ಲಿ ಸಚಿನ್‌, ಮಹಿಳೆಯರ ಹ್ಯಾಮರ್‌ ಎಸೆತದಲ್ಲಿ ಅಮ್ರೀನ್‌, ಪುರುಷರ 800 ಮೀ ,. ಓಟದಲ್ಲಿ ತುಷಾರ್‌, ಮಹಿಳಾ ವಿಭಾಗದಲ್ಲಿ ಅರ್ಪಿತಾ ಚಿನ್ನ ತಮ್ಮದಾಗಿಸಿಕೊಂಡರು. ಭಾನುವಾರ ಕೂಟದ ಕೊನೆ ದಿನ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!