ಸ್ವಹಿತಾಸಕ್ತಿ ವಿವಾದದಲ್ಲಿ ರೆಫ್ರಿ ಅಖಿಲ್

Published : Oct 01, 2018, 11:27 AM IST
ಸ್ವಹಿತಾಸಕ್ತಿ ವಿವಾದದಲ್ಲಿ ರೆಫ್ರಿ ಅಖಿಲ್

ಸಾರಾಂಶ

‘ಅಖಿಲ್ ಈಗಷ್ಟೇ ಬಿಸಿಸಿಐ ರೆಫ್ರಿಯಾಗಿದ್ದಾರೆ. ಈ ಕೂಡಲೇ ಅವರನ್ನು ಆಯ್ಕೆ ಸಮಿತಿಯಿಂದ ಕೈ ಬಿಡಲು ಸಾಧ್ಯವಿಲ್ಲ. ಅಖಿಲ್, ಕಿರಿಯರ ವಿಭಾಗದಲ್ಲಿ ಸಾಕಷ್ಟು ಪಂದ್ಯಗಳನ್ನು ವೀಕ್ಷಿಸಿದ್ದು ರಾಜ್ಯ ತಂಡವನ್ನು ಆಯ್ಕೆ ಮಾಡಲಿದ್ದಾರೆ. 

ಬೆಂಗಳೂರು(ಅ.01]: ಕಳೆದ ಶನಿವಾರವಷ್ಟೇ ಬಿಸಿಸಿಐ ಮ್ಯಾಚ್ ರೆಫ್ರಿಯಾಗಿ ಆಯ್ಕೆಯಾಗಿದ್ದ ಕರ್ನಾಟಕದ ಮಾಜಿ ಆಲ್ರೌಂಡರ್ ಅಖಿಲ್ ಬಾಲಚಂದ್ರ ಸ್ವ ಹಿತಾಸಕ್ತಿ ಸಂಘರ್ಷದ ವಿವಾದದಲ್ಲಿ ಸಿಲುಕಿದ್ದಾರೆ. ಅಖಿಲ್ ಸದ್ಯ ಕೆಎಸ್‌ಸಿಎ ಅಂಡರ್ 19 ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಏಕಕಾಲದಲ್ಲಿ 2 ಹುದ್ದೆ ನಿರ್ವಹಿಸುವುದು ಸ್ವಹಿತಾಸಕ್ತಿ ಸಂಘರ್ಷಕ್ಕೆ ಎಡೆಮಾಡಿಕೊಡಲಿದೆ. ಈ ಸಂಬಂಧ ಕೆಎಸ್'ಸಿಎಯಲ್ಲಿ ಅಪಸ್ವರ ಕೇಳಿ ಬಂದಿದೆ ಎನ್ನಲಾಗಿದೆ.

‘ಅಖಿಲ್ ಈಗಷ್ಟೇ ಬಿಸಿಸಿಐ ರೆಫ್ರಿಯಾಗಿದ್ದಾರೆ. ಈ ಕೂಡಲೇ ಅವರನ್ನು ಆಯ್ಕೆ ಸಮಿತಿಯಿಂದ ಕೈ ಬಿಡಲು ಸಾಧ್ಯವಿಲ್ಲ. ಅಖಿಲ್, ಕಿರಿಯರ ವಿಭಾಗದಲ್ಲಿ ಸಾಕಷ್ಟು ಪಂದ್ಯಗಳನ್ನು ವೀಕ್ಷಿಸಿದ್ದು ರಾಜ್ಯ ತಂಡವನ್ನು ಆಯ್ಕೆ ಮಾಡಲಿದ್ದಾರೆ. ಆ ಬಳಿಕ ಸಮಿತಿಯಿಂದ ಅಖಿಲ್ ರನ್ನು ಮುಕ್ತಗೊಳಿಸಲಾಗುವುದು’ ಎಂದು ಕೆಎಸ್‌ಸಿಎ ವಕ್ತಾರ ವಿನಯ್
ಮೃತ್ಯುಂಜಯ ‘ಕನ್ನಡಪ್ರಭ’ ಕ್ಕೆ ತಿಳಿಸಿದರು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಖಿಲ್, ‘ಎರಡೂ ಹುದ್ದೆಗಳಲ್ಲೂ ಮುಂದುವರೆಯುತ್ತೇನೆ’ ಎಂದಿದ್ದಾರೆ. ಸೋಮವಾರ ಕೂಚ್ ಬೆಹಾರ್ ಟೂರ್ನಿಗೆ ರಾಜ್ಯ ಕಿರಿಯರ ತಂಡವನ್ನು ಆಯ್ಕೆ ಮಾಡಲು ಸಭೆ ಕರೆಯಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!